alex Certify BIG NEWS: ಫ್ಲಾಪ್ ಆಯ್ತಾ ಮಾಜಿ ಮೇಯರ್ ಹೊಸ ನಾಟಕ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಫ್ಲಾಪ್ ಆಯ್ತಾ ಮಾಜಿ ಮೇಯರ್ ಹೊಸ ನಾಟಕ…?

ಬೆಂಗಳೂರು: ಶಾಸಕರ ಮನೆ ಬೆಂಕಿ ಹಾಗೂ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಹೊಸ ನಾಟಕವಾಡಿದ್ದು, ಇದೀಗ ಆ ನಾಟಕದ ಪ್ಲಾನ್ ಕೂಡ ಫ್ಲಾಪ್ ಆಗಿದೆಯೇ ಎಂಬ ಅನುಮಾನ ಆರಂಭವಾಗಿದೆ.

ಸಂಪತ್ ರಾಜ್, ತಮಗೆ ಹೃದಯ ಸಂಬಂಧಿ ಸಮಸ್ಯೆಯಿದೆ, ಎದೆ ನೋವು ಎಂದು ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಜಯದೇವ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು. ಈ ಹಿನ್ನೆಲೆಯಲ್ಲಿ ಸಂಪತ್ ರಾಜ್ ಅವರ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ರಿಪೋರ್ಟ್ ನಲ್ಲಿ ನಾರ್ಮಲ್ ಎಂದು ಬಂದಿದೆ. ಅಲ್ಲದೇ ವೈದ್ಯರು ಕೂಡ ಸಂಪತ್ ರಾಜ್ ಗೆ ಯಾವುದೇ ಸಮಸ್ಯೆಯಿಲ್ಲ. ಅನಾರೋಗ್ಯ ಕಂಡು ಬಂದರೆ ತಕ್ಷಣಕ್ಕೆ ಜೈಲಿನ ವೈದ್ಯರಿಂದ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ ಎನ್ನಲಾಗಿದೆ. ಹಾಗಾಗಿ ಸಂಪತ್ ರಾಜ್ ಅವರನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಒಟ್ಟಾರೆ ಈ ಹಿಂದೆ ಕೋವಿಡ್ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್, ಗುಣಮುಖರಾದ ಬೆನ್ನಲ್ಲೇ ಆಸ್ಪತ್ರೆಯಿಂದ ಎಸ್ಕೇಪ್ ಆಗಿ ನಾಟಕವಾಡಿದ್ದರು. ಇದೀಗ ಎದೆ ನೋವು ಎಂದು ಹೇಳಿ ಆಸ್ಪತ್ರೆಗೆ ದಾಖಲಾಗುವ ಹೊಸ ನಾಟಕವಾಡಿದ್ದರೆ ಎಂಬ ಅನುಮಾನ ಮೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...