alex Certify BIG NEWS: ಬಿಜೆಪಿಯಿಂದ ತಿರುಕನ ಕನಸು ಎಂದು ಕಾಂಗ್ರೆಸ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಯಿಂದ ತಿರುಕನ ಕನಸು ಎಂದು ಕಾಂಗ್ರೆಸ್ ಕಿಡಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, ಅಧಿಕಾರ ಸಿಕ್ಕಾಗಲೆಲ್ಲ ಬಿಜೆಪಿ ಕಿತ್ತಾಟಗಳನ್ನೇ ಮಾಡುತ್ತಾ, ರಾಜ್ಯದ ಅಭಿವೃದ್ಧಿ, ಆಡಳಿತ ಯಂತ್ರಕ್ಕೆ ಮಾರಕವಾಗಿದೆ ಎಂದು ಕಿಡಿ ಕಾರಿದೆ.

ಈ ಕುರಿತು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಕಾಂಗೆಸ್ ಸಮಿತಿ, ತಮ್ಮ ಬಾಗಿಲು, ಬಿಲಗಳನ್ನು ಮುಚ್ಚಿಕೊಳ್ಳುವ ಬದಲಾಗಿ ಕಾಂಗ್ರೆಸ್ ಮುಕ್ತ ಎಂಬ ತಿರುಕನ ಕನಸು ಕಾಣುತ್ತಿರುವುದು ಹಾಸ್ಯಾಸ್ಪದ. ಅಧಿಕಾರದ ದಾಹಕ್ಕಾಗಿ ಬಿಜೆಪಿ ನಾಯಕರು ಕಿತ್ತಾಡಿಕೊಂಡು ರಾಜ್ಯದ ಅಭಿವೃದ್ಧಿ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದೆ.

ಇನ್ನು ಮಹಾಲಿಂಗಪುರ ಎಳೆದಾಡಿದ ಘಟನೆಯಿಂದ ಪುರಸಭೆ ಸದಸ್ಯೆ ಚಾಂದಿನಿ ನಾಯಕ್ ಅವರಿಗೆ ಗರ್ಭಪಾತವಾಗಿದ್ದರೂ ಸಿಎಂ ಯಡಿಯೂರಪ್ಪ ಅವರಾಗಲಿ, ಸಚಿವೆ ಶಶಿಕಲಾ ಜೊಲ್ಲೆಯವರಾಗಲಿ, ಸಂಸದೆ ಶೋಭಾ ಕರಂದ್ಲಾಜೆಯವರಾಗಲಿ ಈವರೆಗೂ ಮೌನವಾಗಿದ್ದೇಕೆ? ಈ ಘಟನೆ ವಿಚಾರವಾಗಿ ಪಕ್ಷದ ನಿಲುವೇನು ಎಂದು ಪ್ರಶ್ನಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...