alex Certify BIG NEWS: ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರಿಗೆ ಬಂಪರ್ ಸುದ್ದಿ‌ – ಇಂದು ಮತ್ತು ನಾಳೆ 800 ಹೆಚ್ಚುವರಿ ಬಸ್‌ ಗಳ ನಿಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರಿಗೆ ಬಂಪರ್ ಸುದ್ದಿ‌ – ಇಂದು ಮತ್ತು ನಾಳೆ 800 ಹೆಚ್ಚುವರಿ ಬಸ್‌ ಗಳ ನಿಯೋಜನೆ

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಳೆ ರಾತ್ರಿಯಿಂದ ವಾರಗಳ ಕಾಲ ಕಂಪ್ಲೀಟ್‌ ಲಾಕ್‌ ಡೌನ್‌ ಮಾಡುತ್ತಿದ್ದು, ಹೀಗಾಗಿ ಬಹಳಷ್ಟು ಜನ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ತೆರಳುತ್ತಿದ್ದಾರೆ.

ಇವರುಗಳ ಅನುಕೂಲಕ್ಕಾಗಿ ಇಂದು‌ ಮತ್ತು ನಾಳೆ ತಲಾ 800 ‌‌ಬಸ್ಸುಗಳನ್ನು ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿಯಾಗಿ ಕಾರ್ಯಚರಣೆ ಮಾಡಲು ನಿಯೋಜಿಸಲಾಗಿದ್ದು, ಇದು ಅನುಕೂಲಕರವಾಗಲಿದೆ‌.

ಇಂದು ಬೆಳಿಗ್ಗೆ 10 ಗಂಟೆಯವರೆಗೆ 249 ಬಸ್ಸುಗಳನ್ನು ಬೆಂಗಳೂರಿನಿಂದ ಕಾರ್ಯಚರಣೆಗೊಳಿಸಿದ್ದು, 6641 ಪ್ರಯಾಣಿಕರು ಈಗಾಗಲೇ ಪ್ರಯಾಣಿಸಿರುತ್ತಾರೆ. ಇಂದು 231 ಬಸ್ಸುಗಳು ಮುಂಗಡ ಬುಕ್ಕಿಂಗ್ ಆಗಿವೆ.

ಸಾಮಾಜಿಕ ಅಂತರ ಕಾಪಾಡಿ, ಪ್ರತಿಯೊಬ್ಬ ಪ್ರಯಾಣಿಕರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗುತ್ತಿದ್ದು, ವೃಥಾ ಆತಂಕಕ್ಕೆ ಒಳಗಾಗಬಾರದೆಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಲ್ ಸೆಂಟರ್ ನಂ. 9449596666 ಹಾಗೂ ಮುಂಗಡ ಟಿಕೇಟ್ ಬುಕ್ಕಿಂಗ್ ಗೆ www.ksrtc.in ಅನ್ನು ಸಂಪರ್ಕಿಸಲು ತಿಳಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...