alex Certify BIG NEWS: ಮುಂದುವರೆದ ಬಿಜೆಪಿ-ಕಾಂಗ್ರೆಸ್ ಟ್ವೀಟ್ ಸಮರ; ಬೆಂಕಿಯಿಲ್ಲದೆ ಹೊಗೆಯಾಡುವುದೇ ಎಂದು ಮಹಾನಾಯಕಿ ಹೇಳಿಕೆ ಉಲ್ಲೇಖಿಸಿದ ಬಿಜೆಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದುವರೆದ ಬಿಜೆಪಿ-ಕಾಂಗ್ರೆಸ್ ಟ್ವೀಟ್ ಸಮರ; ಬೆಂಕಿಯಿಲ್ಲದೆ ಹೊಗೆಯಾಡುವುದೇ ಎಂದು ಮಹಾನಾಯಕಿ ಹೇಳಿಕೆ ಉಲ್ಲೇಖಿಸಿದ ಬಿಜೆಪಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಾಯಕರ ಕೈವಾಡವಿದೆ ಎಂಬ ಆರೋಪ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದೇ ವಿಚಾರವಾಗಿ ಈಗ ಕಾಂಗ್ರೆಸ್-ಬಿಜೆಪಿ ನಡುವೆ ಟ್ವೀಟ್ ವಾರ್ ಮುಂದುವರೆದಿದೆ.

ಸಿಡಿ ಪ್ರಕರಣದಲ್ಲಿ ಮಹಾನಾಯಕರ ಜೊತೆ ಇದೀಗ ಮಹಾನಾಯಕಿಯ ಹೆಸರೂ ಕೇಳಿಬಂದಿದ್ದು, ರಾಜ್ಯ ಬಿಜೆಪಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ.

ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಮಹಾನಾಯಕರೊಬ್ಬರು ಹೇಳಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ, ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು ಹೇಳಿದ್ದಾರೆ. ಏನಿದೆಲ್ಲಾ!? ಬೆಂಕಿಯಿಲ್ಲದೆ ಹೊಗೆಯಾಡುವುದೇ? ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್‌ ಹಗೆತನ ಸಾಧಿಸುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...