ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಟವಾಗಿದೆ. ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ನಂತ್ರ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಕೇಂದ್ರದ ಮಾರ್ಗಸೂಚಿಯಂತೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಡಿಯೋ ಕಾನ್ಫರೆನ್ಸ್ ನಂತ್ರ ಮಾತನಾಡಿದ ಸಚಿವ ಆರ್. ಅಶೋಕ್, ಕಟ್ಟಡ ಕಾಮಗಾರಿ ಕೆಲಸಕ್ಕೆ ಸಂಬಂಧಿಸಿದ ಎಲ್ಲ ಅಂಗಡಿಗಳ ತೆರವಿಗೆ ಅನುಮತಿ ನೀಡಲಾಗಿದೆ ಎಂದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಲ್ಲ ಕೈಗಾರಿಕೆ ತೆರೆಯಲು ಅನುಮತಿ ನೀಡಲಾಗಿದೆ. ಇಂದಿನಿಂದಲೇ ಕೈಗಾರಿಕೆಗಳು ಕೆಲಸ ಮಾಡಬಹುದು. ಆದ್ರೆ ಶೇಕಡಾ 30ರಷ್ಟು ಉದ್ಯೋಗಿಗಳು ಕೆಲಸ ಮಾಡಬೇಕೆಂದು ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಿಮೆಂಟ್, ಕ್ರಶರ್, ಕಬ್ಬಿಣ ವ್ಯಾಪಾರ, ಎಲೆಕ್ಟ್ರಿಕ್ ಐಟಂ, ಕನ್ಸ್ಟ್ರಕ್ಷನ್ ಗೆ ಸಂಬಂಧಿಸಿದ ಅಂಗಡಿ ತೆರೆಯಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಸ್ಯಾನಿಟರಿ, ಟೈಲ್ಸ್ ಎಲ್ಲ ಅಂಗಡಿ ಕೂಡ ತೆರೆಯಬಹುದು ಎಂದು ಅವರು ಹೇಳಿದ್ದಾರೆ. ಬೆಂಗಳೂರನ್ನು ಒಂದು ಯುನಿಟ್ ಮಾಡುವುದು ಬೇಡ. ನಾಲ್ಕು ಭಾಗಗಳಾಗಿ ವಿಂಗಡಿಸಬೇಕೆಂದು ಮನವಿ ಸಲ್ಲಿಸಲಾಗ್ತಿದೆ ಎಂದು ಅಶೋಕ್ ಹೇಳಿದ್ದಾರೆ. ಲಾಕ್ ಡೌನ್ ವೇಳೆ ಮಾಲ್, ಮಾರುಕಟ್ಟೆ ಓಪನ್ ಆಗುವುದಿಲ್ಲವೆಂದು ಅಶೋಕ್ ಹೇಳಿದ್ದಾರೆ.
ಮದ್ಯದಂಗಡಿ ತೆರವಿನ ಬಗ್ಗೆಯೂ ಅಶೋಕ್ ಮಾಹಿತಿ ನೀಡಿದ್ದಾರೆ. ಮದ್ಯ ಮಾರಾಟದ ವಿಚಾರ ಸಿಎಂ ಯಡಿಯೂರಪ್ಪನವರಿಗೆ ಬಿಟ್ಟಿದ್ದು. ಮೇ 4ರ ನಂತ್ರ ಅವ್ರು ನಿರ್ಧಾರ ತೆಗೆದುಕೊಳ್ಳಲಿದ್ದಾರೆಂದು ಅಶೋಕ್ ಹೇಳಿದ್ದಾರೆ.