alex Certify BIG NEWS: ರೈತರ ಪ್ರತಿಭಟನೆಗೆ ಬೆಂಬಲವಿಲ್ಲ ಎಂದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈತರ ಪ್ರತಿಭಟನೆಗೆ ಬೆಂಬಲವಿಲ್ಲ ಎಂದ ಕುಮಾರಸ್ವಾಮಿ

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಬಾರುಕೋಲು ಚಳುವಳಿ ಹಾಗೂ ಪ್ರತಿಭಟನೆಗೆ ನಮ್ಮ ಬೆಂಬಲವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಭೂ ಸುಧಾರಣಾ ತಿದ್ದುಪಡಿ ವಿಧೇಯಕದಲ್ಲಿ ರೈತರಿಗೆ ಮಾರಕವಾಗುವ ಯಾವುದೇ ಅಂಶಗಳಿಲ್ಲ. ಈ ಬಗ್ಗೆ ರೈತರಲ್ಲಿ ತಪ್ಪು ತಿಳುವಳಿಕೆ ಬೇಡ. ಮೊದಲು ತಿದ್ದುಪಡಿ ಮಸೂದೆ ಬಗ್ಗೆ ತಿಳಿದುಕೊಳ್ಳಲಿ ಎಂದರು.

ಆರಂಭದಲ್ಲಿ ನಾವು ಕೂಡ ವಿಧೇಯಕ ವಿರೋಧಿಸಿದೆವು. ಕೆಲವೊಂದು ಮಾರಕ ಅಂಶಗಳನ್ನು ಸರ್ಕಾರ ಕೈಬಿಟ್ಟಿದೆ. ಹಾಗಾಗಿ ಭೂ ಸುಧಾರಣಾ ಮಸೂದೆಗೆ ನಮ್ಮ ಬೆಂಬಲ ವ್ಯಕ್ತಪಡಿಸಿದ್ದೇವೆ. ನಾವು ರಾಜಕೀಯ ಉದ್ದೇಶಕ್ಕಾಗಿ ಹೋರಾಟಗಳಿಗೆ ಬೆಂಬಲ ನೀಡುವುದಿಲ್ಲ. ರೈತರು ನಡೆಸುತ್ತಿರುವ ಈ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...