alex Certify BIG NEWS: ವಲಸಿಗ ಶಾಸಕರಿಗಾಗಿ ಯೋಗೇಶ್ವರ್, ಎಂ.ಟಿ.ಬಿಯಿಂದ ಸಾಲ ಪಡೆದಿದ್ದರು – ಸಚಿವ ಜಾರಕಿಹೊಳಿ ಅಚ್ಚರಿ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಲಸಿಗ ಶಾಸಕರಿಗಾಗಿ ಯೋಗೇಶ್ವರ್, ಎಂ.ಟಿ.ಬಿಯಿಂದ ಸಾಲ ಪಡೆದಿದ್ದರು – ಸಚಿವ ಜಾರಕಿಹೊಳಿ ಅಚ್ಚರಿ ಹೇಳಿಕೆ

ಬೆಳಗಾವಿ: ಸಿ.ಪಿ.ಯೋಗೇಶ್ವರ್ ಪರ ಬ್ಯಾಟ್ ಬೀಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕೊಹೊಳಿ, ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನೀಡಿರುವುದು ಉತ್ತಮ ವಿಚಾರ ಎಂದಿದ್ದಾರೆ. ಅಲ್ಲದೇ ಯೋಗೇಶ್ವರ್ ಕುರಿತು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ, ವಲಸಿಗ ಶಾಸಕರನ್ನು ಒಗ್ಗೂಡಿಸುವಲ್ಲಿ ಯೋಗೇಶ್ವರ್ ಪಾತ್ರ ಪ್ರಮುಖವಾಗಿದೆ. ನಮ್ಮನ್ನು ಒಟ್ಟುಗೂಡಿಸಲೆಂದೇ ಅವರು ಎಂ.ಟಿ.ಬಿ. ನಾಗರಾಜ್ ಅವರಿಂದ ಸಾಲ ಪಡೆದಿದ್ದರು. ತಮ್ಮ ಮನೆಯ ಮೇಲೆ 9 ಕೋಟಿ ಸಾಲ ಮಾಡಿದ್ದಾರೆ. ಅವರು ಅಷ್ಟು ಕಷ್ಟಪಟ್ಟು ಬಿಜೆಪಿ ಸರ್ಕಾರ ರಚನೆಗೆ ಮಹತ್ವದ ಪಾತ್ರ ವಹಿಸಿರುವುದಕ್ಕೆ ಇಂದು ಅವರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿರುವುದು ಅವರ ಶ್ರಮಕ್ಕೆ ಸಿಕ್ಕ ಫಲ ಎಂದು ಹೇಳಿದ್ದಾರೆ.

ಆದರೆ ಸಚಿವ ಜಾರಕಿಹೊಳಿ ಹೇಳಿಕೆ ಅಲ್ಲಗಳೆದಿರುವ ಎಂ.ಟಿ.ಬಿ. ನಾಗರಾಜ್, ನನ್ನ ಹಾಗೂ ಯೋಗೇಶ್ವರ್ ನಡುವೆ ಯಾವುದೇ ರೀತಿಯ ವ್ಯವಹಾರವಿಲ್ಲ. ನಾನು ಅವರಿಗೆ ಸಾಲ ನೀಡಿಲ್ಲ. ರಮೇಶ್ ಜಾರಕಿಹೊಳಿ ಇಂತಹ ಹೇಳಿಕೆ ಯಾಕೆ ಕೊಟ್ಟಿದ್ದಾರೆ ಎಂಬುದನ್ನು ಅವರ ಬಳಿಯೇ ಕೇಳುತ್ತೇನೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...