alex Certify BIG NEWS: ಶಾಮನೂರು ಶಿವಶಂಕರಪ್ಪ ವಿರುದ್ಧ ಸಂಸದ ಜಿ.ಎಂ. ಸಿದ್ದೇಶ್ವರ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಮನೂರು ಶಿವಶಂಕರಪ್ಪ ವಿರುದ್ಧ ಸಂಸದ ಜಿ.ಎಂ. ಸಿದ್ದೇಶ್ವರ್ ವಾಗ್ದಾಳಿ

ದಾವಣಗೆರೆ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್, ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ನಾನೊಬ್ಬನೇ ಟಾರ್ಗೆಟ್ ಆಗಿದ್ದೇನೆ ನನ್ನ ಮುಗಿಸಿದರೇ ಜಿಲ್ಲೆ ಆಳಬಹುದು ಎಂದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಿಲಯನ್ಸ್ ಜಿಯೋ ಗ್ರಾಹಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ದಾವಣಗೆರೆಯಲ್ಲಿ ಮಾತನಾಡಿದ ಸಂಸದ ಸಿದ್ದೇಶ್ವರ್, ಶಾಮನೂರು ಶಿವಶಂಕರಪ್ಪನವರಿಗೆ ನಾನೊಬ್ಬನೇ ಟಾರ್ಗೆಟ್. ಹಾಗಾಗಿ ನನ್ನನ್ನು ರಾಜಕೀಯವಾಗಿ ಮುಗಿಸಿದರೆ ಜಿಲ್ಲೆಯಲ್ಲಿ ಆಳಬಹುದು ಎಂಬ ಕನಸು ಕಾಣುತಿದ್ದಾರೆ. ಕಾಂಗ್ರೆಸ್ ಬ್ಯಾನರ್ ನಡಿ ಲಸಿಕೆ ಹಾಕಲಾಗುತ್ತಿತ್ತು ಇದನ್ನು ತಡೆದಿದ್ದೇನೆ. ಇದೇ ಕಾರಣಕ್ಕೆ ನನ್ನ ವಿರುದ್ಧ ಪದೇ ಪದೇ ಮುಗಿಬಿದ್ದು, ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗುಡುಗಿದರು.

ಕೋವಿಡ್‌ ಲಸಿಕೆ ಪಡೆದ ಕ್ಯಾನ್ಸರ್‌ ಪೀಡಿತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ನನ್ನ ಬಗ್ಗೆ ಜನರಿಗೆ ಗೊತ್ತಿದೆ. ಹಾಗಾಗಿಯೇ ಜನರು ನನ್ನನ್ನು 4 ಬಾರಿ ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ನಾಟಕ ದಾವಣಗೆರೆಯಲ್ಲಿ ನಡೆಯಲಾರದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...