alex Certify BIG NEWS: ಸಂಪುಟ ಸಭೆಗೆ ಹಿರಿಯ ಸಚಿವರೇ ಗೈರು…? ಕುತೂಹಲ ಕೆರಳಿಸಿದ ಬಿಜೆಪಿ ನಾಯಕರ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪುಟ ಸಭೆಗೆ ಹಿರಿಯ ಸಚಿವರೇ ಗೈರು…? ಕುತೂಹಲ ಕೆರಳಿಸಿದ ಬಿಜೆಪಿ ನಾಯಕರ ನಡೆ

ಬೆಂಗಳೂರು: ರಾಜ್ಯ ರಾಜಕೀಯ ಕ್ಷಣಕ್ಷಣಕ್ಕೂ ಕುತೂಹಲವನ್ನು ಹೆಚ್ಚಿಸುತ್ತಿದೆ. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಹಿರಿಯ ಸಚಿವರೇ ಗೈರಾಗುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

ವಿಧಾನಸೌಧದಲ್ಲಿ ನಾಳೆ ಬೆಳಿಗ್ಗೆ 10-30ಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ನೆಪಗಳನ್ನು ಹೇಳಿ ಸಚಿವರಾದ ಆರ್. ಅಶೋಕ್, ಲಕ್ಷ್ಮಣ ಸವದಿ, ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್.ಈಶ್ವರಪ್ಪ ಗೈರಾಗುತ್ತಿದ್ದಾರೆ ಎನ್ನಲಾಗಿದೆ.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತನ್ನ ಆಪ್ತರಿಗೆ ಸಚಿವ ಸ್ಥಾನ ಕೊಡಿಸುವ ಸಲುವಾಗಿ ಹಲವು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದರೆ, ಇದೀಗ ಸಚಿವ ಆರ್. ಅಶೋಕ್ ಹಾಗೂ ಲಕ್ಷ್ಮಣ ಸವದಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಕಚೇರಿ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಇನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೈದರಾಬಾದ್ ಪಾಲಿಕೆ ಚುನಾವಣೆ ವಿಚಾರವಾಗಿ ಕಾರ್ಯತಂತ್ರ ರೂಪಿಸಲು ಹೈದರಾಬಾದ್ ಗೆ ತೆರಳುತ್ತಿದ್ದು, ಸಂಪುಟ ಸಭೆಯಲ್ಲಿ ಭಾಗಿಯಾಗಲ್ಲ ಎಂದಿದ್ದಾರೆ. ಒಟ್ಟಾರೆ ಸಂಪುಟ ಸಭೆಗೆ ಹಿರಿಯ ಸಚಿವರೇ ಗೈರಾಗುತ್ತಿರುವುದು ಬಿಜೆಪಿಯಲ್ಲಿ ಹಲವು ವಿದ್ಯಮಾನಗಳು ನಡೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...