alex Certify BIG NEWS: ಸಿಎಂ ಕುಟುಂಬದವರಿಗೆ ವಕ್ಕರಿಸಿದ ಕೊರೊನಾ; ಕೋವಿಡ್ ಸುಳಿಯಲ್ಲಿ ಮುಖ್ಯಮಂತ್ರಿ ಫ್ಯಾಮಿಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಕುಟುಂಬದವರಿಗೆ ವಕ್ಕರಿಸಿದ ಕೊರೊನಾ; ಕೋವಿಡ್ ಸುಳಿಯಲ್ಲಿ ಮುಖ್ಯಮಂತ್ರಿ ಫ್ಯಾಮಿಲಿ

ಬೆಂಗಳೂರು: ಕೋವಿಡ್ 2ನೇ ಅಲೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಆತಂಕವನ್ನು ಸೃಷ್ಟಿಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುಟುಂಬ ಸದಸ್ಯರೆಲ್ಲಾ ಕೊರೊನಾ ಸುಳಿಯಲ್ಲಿ ಸಿಲುಕಿದ್ದಾರೆ.

ಸಿಎಂ ಯಡಿಯೂರಪ್ಪನವರಿಗೆ ಎರಡನೇ ಬಾರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಈಗ ಮುಖ್ಯಮಂತ್ರಿಗಳ ಮಗಳು, ಮೊಮ್ಮಗಳು, ಅಳಿಯನಿಗೂ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

 ಸಿಎಂ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್

ಸಿಎಂ ಹಿರಿಯ ಪುತ್ರಿ ಪದ್ಮಾವತಿ ಹಾಗೂ ಅವರ ಮಗಳು ಡಾ. ಸೌಂದರ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಡಾ. ಸೌಂದರ್ಯ ಅವರ ಪತಿ ಡಾ. ನಿರಂಜನ್ ಅವರಿಗೂ ಸೋಂಕು ತಗುಲಿದೆ. ಹೀಗಾಗಿ ಸಿಎಂ ಫ್ಯಾಮಿಲಿಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಂದೇ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...