alex Certify BIG NEWS: ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಪ್ಲಾನ್ ಮಾಡಿದ್ದ ಕಿಂಗ್ ಪಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಪ್ಲಾನ್ ಮಾಡಿದ್ದ ಕಿಂಗ್ ಪಿನ್

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಸುದ್ದಿಗಳು ಹೊರಬರುತ್ತಲೇ ಇದೆ. ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಪತ್ರಕರ್ತ, ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನ ನಡೆಸಲು ಯೋಜನೆ ರೂಪಿಸಿದ್ದ. ಡೀಲ್ ದುಡ್ಡಲ್ಲಿ ಜಾತ್ರೆ ನಡೆಸಲು ಕೂಡ ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.

ಸಾಹುಕಾರ್ ಸಿಡಿ ಪ್ರಕರಣ – ಸಂತ್ರಸ್ತ ಯುವತಿಗೆ ರಕ್ಷಣೆ ನೀಡಲು ಸಿದ್ಧ ಎಂದ ರಾಜ್ಯ ಮಹಿಳಾ ಆಯೋಗ

ಮಹಿಂದ್ರಾ ಕಂಪನಿಯ ಎರಡು ಕಾರ್ ಖರೀದಿಸಲು ಮುಂದಾಗಿದ್ದ ಆತ ಮಹೀಂದ್ರಾ XUV ಹಾಗೂ ಥಾರ್ ಜೀಪ್ ಖರೀದಿ ಮಾಡಲು ನಿರ್ಧರಿಸಿದ್ದ. ಅದಕ್ಕಾಗಿ ಕಾರು ಬುಕ್ ಕೂಡ ಮಾಡಿದ್ದ. ಅಲ್ಲದೇ ಕೊಡಗು ಹಾಗೂ ಮೈಸೂರು ಭಾಗದಲ್ಲಿ ಕಾಫಿ ತೋಟ, ಜಮೀನು ಖರೀದಿ ಮಾಡಲು ಪರಿಶೀಲನೆ ನಡೆಸಿದ್ದ. ಈ ಬಗ್ಗೆ ತನ್ನ ಸ್ನೇಹಿತರಿಗೂ ಕರೆ ಮಾಡಿ ಜಮೀನು, ಕಾಫಿ ತೋಟದ ಬಗ್ಗೆ ವಿಚಾರಿಸಿದ್ದ. ಸಿಡಿ ಪ್ರಕರಣ ಗಂಭೀರವಾಗುತ್ತಿದ್ದಂತೆಯೇ ಕಾರು ಖರೀದಿ ಪ್ಲಾನ್ ನಿಂದ ಹಿಂದೆ ಸರಿದಿದ್ದ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...