alex Certify ಬಿಜೆಪಿ ಸರ್ಕಾರ ರಚನೆಗೆ ಸಾಥ್ ನೀಡಿದವರಿಗೆ BSY ಬಂಪರ್ ಕೊಡುಗೆ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸರ್ಕಾರ ರಚನೆಗೆ ಸಾಥ್ ನೀಡಿದವರಿಗೆ BSY ಬಂಪರ್ ಕೊಡುಗೆ..?

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ -ಕಾಂಗ್ರೆಸ್ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಮೂವರು ವಲಸಿಗರಿಗೆ ವಿಧಾನಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಹೇಳಲಾಗಿದೆ.

ಎಂಟಿಬಿ ನಾಗರಾಜ್, ಆರ್. ಶಂಕರ್ ಮತ್ತು ಹೆಚ್. ವಿಶ್ವನಾಥ್ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಕೇಂದ್ರ ಚುನಾವಣಾ ಸಮಿತಿಗೆ ಈ ಮೂವರು ಸೇರಿದಂತೆ ಹಲವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಎಂಟಿಬಿ ನಾಗರಾಜ್, ಆರ್. ಶಂಕರ್ ಮತ್ತು ಹೆಚ್. ವಿಶ್ವನಾಥ್ ಅವರಿಗೆ ಟಿಕೆಟ್ ಕೊಡುವಂತೆ ವರಿಷ್ಠರ ಮನವೊಲಿಸಲು ರಾಜ್ಯ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ ಎಂದು ಹೇಳಲಾಗಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಕೋರ್ ಕಮಿಟಿ ಶಿಫಾರಸು ಮಾಡಿದ್ದ ಹೆಸರುಗಳ ಬದಲಿಸಿ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗಿತ್ತು. ಈ ಬಾರಿ ಮೂವರು ವಲಸಿಗರಿಗೆ ಟಿಕೆಟ್ ಕೊಡಬೇಕು ಎಂದು ಕೋರಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...