alex Certify BREAKING NEWS: ಜಿಲೆಟಿನ್ ಸ್ಫೋಟ ದುರಂತ – ಮೃತ ದೇಹಗಳ ಗುರುತು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜಿಲೆಟಿನ್ ಸ್ಫೋಟ ದುರಂತ – ಮೃತ ದೇಹಗಳ ಗುರುತು ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಜಿಲೆಟಿನ್ ಸ್ಫೋಟಗೊಂಡು ಮೃತಪಟ್ಟವರ ಗುರುತು ಪತ್ತೆಯಾಗಿದೆ. ದುರಂತದಲ್ಲಿ ಐವರು ಸಾವನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಮೃತರಲ್ಲಿ ಓರ್ವ ಆಂಧ್ರಪ್ರದೇಶ ಮೂಲದ 26 ವರ್ಷದ ಪವನ್ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಭದ್ರಾವತಿ ಮೂಲದವರು ಎಂದು ತಿಳಿದು ಬಂದಿದೆ. ಇನ್ನಿಬ್ಬರ ಗುರುತು ಖಚಿತವಾಗಿ ಪತ್ತೆಯಾಗಿಲ್ಲ. ಆದರೆ ಸ್ಥಳೀಯರು ಹೇಳುವ ಪ್ರಕಾರ ಅವರೂ ಕೂಡ ಆಂಧ್ರಪ್ರದೇಶ ಮೂಲದವರು ಎನ್ನಲಾಗಿದೆ.

ಸ್ಫೋಟದ ತೀವ್ರತೆಗೆ ಮೃತ ದೇಹಗಳ ಗುರುತು ಸಿಗದಷ್ಟು ಛಿದ್ರಗೊಂಡಿವೆ. ಮೃತ ದೇಹಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...