alex Certify BREAKING NEWS: ಮಾಜಿ ಮೇಯರ್ ಗೆ ಆಶ್ರಯ ನೀಡಿದಾತ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಮೇಯರ್ ಗೆ ಆಶ್ರಯ ನೀಡಿದಾತ ಅರೆಸ್ಟ್

ಬೆಂಗಳೂರು: ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಿಬಿಎಂಪಿ ಕಾಂಟ್ರಾಕ್ಟರ್ ರಿಯಾಜುದ್ದೀನ್ ಎಂದು ಗುರುತಿಸಲಾಗಿದೆ. ಸಂಪತ್ ರಾಜ್ ಬೆಂಗಳೂರಿನಿಂದ ಎಸ್ಕೇಪ್ ಆಗಲು ಸಹಾಯ ಮಾಡಿದ್ದ ರಿಯಾಜುದ್ದೀನ್, ತಮ್ಮದೇ ವಾಹನದಲ್ಲಿ ಸಂಪತ್ ರಾಜ್ ಅವರನ್ನು ನಾಗರಹೊಳೆಯ ಫಾರ್ಮ್ ಹೌಸ್ ಗೆ ಕರೆದುಕೊಂಡು ಹೋಗಿ ಬಿಟ್ಟಿದ್ದರು.

ಇದೀಗ ರಿಯಾಜುದ್ದೀನ್ ಎಂಬುವವರನ್ನು ಬಂಧಿಸಲಾಗಿದ್ದು, ಸಂಪತ್ ರಾಜ್ ಅವರಿಗಾಗಿ ತೀವ್ರ ಶೋಧ ಮುಂದುವರಿದಿದೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...