alex Certify BREAKING NEWS: ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು; ಸಿಡಿ ಯುವತಿ ಪರ ವಕೀಲ ಜಗದೀಶ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು; ಸಿಡಿ ಯುವತಿ ಪರ ವಕೀಲ ಜಗದೀಶ್ ಸ್ಪಷ್ಟನೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಉಲ್ಟಾ ಹೇಳಿಕೆ ನೀಡಿದ್ದು, ಇಡೀ ಪ್ರಕರಣ ಹೊಸ ತಿರುವು ಪಡೆದಿದೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು ಎಂದು ಯುವತಿ ಪರ ವಕೀಲ ಕೆ.ಎನ್. ಜಗದೀಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಕೀಲ ಜಗದೀಶ್, ಎಸ್ಐಟಿ ಮುಂದೆ ಹಾಜರಾದ ಯುವತಿ ಯಾವುದೇ ಉಲ್ಟಾ ಹೇಳಿಕೆ, ತದ್ವಿರುದ್ಧವಾದ ಹೇಳಿಕೆ ನೀಡಿಲ್ಲ. ಆರೋಪಿ ಪ್ರಭಾವಿಯಾಗಿರುವುದರಿಂದ ಇಂತಹ ಸುದ್ದಿ ಹರಡುತ್ತಿದೆ. ಇಂಥ ಸುದ್ದಿಗಳಿಗೆ ಮಹತ್ವ ಕೊಡಬೇಕಾಗಿಲ್ಲ ಎಂದು ಹೇಳಿದರು.

ಇದೇ ವೇಳೆ ಮಾತನಾಡಿರುವ ಇನ್ನೋರ್ವ ವಕೀಲ ಸೂರ್ಯ ಮುಕುಂದರಾಜ್, ಯುವತಿ ಎಸ್ಐಟಿ ಮುಂದೆ ಇಂದು ಯಾವುದೇ ಹೇಳಿಕೆಯನ್ನೇ ನೀಡಿಲ್ಲ ಎಂದ ಮೇಲೆ ಉಲ್ಟಾ ಹೇಳಿಕೆ ಎಲ್ಲಿಂದ ಬಂತು? ಪ್ರಕರಣದ ಬಗ್ಗೆ ಹೆಚ್ಚಿನ ಸಾಕ್ಷ್ಯ ಒದಗಿಸಲು ಮಾತ್ರ ಅಧಿಕಾರಿಗಳ ಮುಂದೆ ಯುವತಿ ಹಾಜರಾಗಿದ್ದಾಳೆ. ನಾನೂ ಕೂಡ ಸಧ್ಯ ಎಸ್ಐಟಿ ಮುಂದೆಯೇ ಇದ್ದೇನೆ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ನೋಡಿ ಯುವತಿಯೂ ಶಾಕ್ ಆಗಿದ್ದಾಳೆ. ನಾನು ಆ ರೀತಿ ಹೇಳಿಕೆಯನ್ನೇ ನೀಡಿಲ್ಲ ಆದರೂ ಸುಳ್ಳು ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಯುವತಿ ತಿಳಿಸಿದ್ದಾಳೆ ಎಂದು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...