alex Certify BREAKING NEWS: ಸಿಎಂ ಯಡಿಯೂರಪ್ಪಗೆ ದೇವರು ಒಳ್ಳೆಯದು ಮಾಡಲ್ಲ; ಕೊಟ್ಟ ಮಾತು ತಪ್ಪಿದ್ದಾರೆ ಎಂದು ವಿಶ್ವನಾಥ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಎಂ ಯಡಿಯೂರಪ್ಪಗೆ ದೇವರು ಒಳ್ಳೆಯದು ಮಾಡಲ್ಲ; ಕೊಟ್ಟ ಮಾತು ತಪ್ಪಿದ್ದಾರೆ ಎಂದು ವಿಶ್ವನಾಥ್ ಕಿಡಿ

ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಂಎಲ್ಸಿ ಹೆಚ್.ವಿಶ್ವನಾಥ್, ಯಡಿಯೂರಪ್ಪನವರಿಗೆ ದೇವರು ಒಳ್ಳೆಯದು ಮಾಡಲ್ಲ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್. ವಿಶ್ವನಾಥ್, ಸಿಎಂ ಯಡಿಯೂರಪ್ಪ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ನಮ್ಮ 17 ಜನರ ತ್ಯಾಗವನ್ನು ಇಂದು ಯಡಿಯೂರಪ್ಪ ಮರೆತಿದ್ದಾರೆ. ಇದರಿಂದ ಮನಸ್ಸಿಗೆ ತುಂಬಾ ನೋವಾಗುತ್ತಿದೆ. ಅವರಿಗೆ ಯಡಿಯೂರು ಸಿದ್ದಲಿಂಗೇಶ್ವರ ಕೂಡ ಒಳ್ಳೆಯದನ್ನು ಮಾಡಲ್ಲ ಎಂದು ಶಪಿಸಿದ್ದಾರೆ.

ಸಿ.ಪಿ. ಯೋಗೇಶ್ವರ್ ಒಬ್ಬ ಫ್ರಾಡ್, ಚೀಟರ್. ಅವರ ವಿರುದ್ಧ 420 ಕೇಸ್ ಇದೆ. ನಿವೇಶನದ ಹೆಸರಲ್ಲಿ ಸಾವಿರಾರು ಜನರಿಗೆ ಯೋಗೇಶ್ವರ್ ಮೋಸ ಮಾಡಿದ್ದಾರೆ. ಯೋಗೀಶ್ವರ್ ಯಾವ ತ್ಯಾಗ ಮಾಡಿದ್ದಾರೆ. ಸರ್ಕಾರ ರಚನೆಯಲ್ಲಿ ಅವರ ಪಾತ್ರವೇನೆಂದು ಅವರಿಗೆ ಮಂತ್ರಿ ಸ್ಥಾನ ನೀಡುತ್ತಿದ್ದಾರೆ? ಯೋಗೀಶ್ವರ್ ಬ್ಲಾಕ್ ಮೇಲ್ ಗೇನಾದರೂ ಸಿಕ್ಕಿ ಹಾಕಿಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಅಬಕಾರಿ ಸಚಿವರಾಗಿದ್ದ ಹೆಚ್. ನಾಗೇಶ್ ಅವರನ್ನು ಯಾಕೆ ಸಂಪುಟದಿಂದ ಕೈ ಬಿಡುತ್ತೀದ್ದೀರಿ? ನಾಗೇಶ್ ಏನು ತಪ್ಪು ಮಾಡಿದ್ದಾರೆ? ಪ್ರಾಮಾಣಿಕವಾಗಿ ಅವರ ಖಾತೆ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ ಅಂತvರಿಗೆ ಅನ್ಯಾಯ ಮಾಡುತ್ತಿರುವುದೇಕೆ? ಸಿಎಂ ಯಡಿಯೂರಪ್ಪ ಇಂದು ನಾಲಿಗೆ ಮತ್ತು ಮಾತು ಕಳೆದುಕೊಂಡಿದ್ದಾರೆ ಎಂದು ವಿಶ್ವನಾಥ್ ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...