alex Certify BREAKING NEWS: ಸಿ.ಪಿ.ಯೋಗೀಶ್ವರ್ ಗೆ ಸಚಿವ ಸ್ಥಾನ ಖಚಿತ; ಸಿಎಂ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿ.ಪಿ.ಯೋಗೀಶ್ವರ್ ಗೆ ಸಚಿವ ಸ್ಥಾನ ಖಚಿತ; ಸಿಎಂ ಹೇಳಿದ್ದೇನು…?

ಬೆಂಗಳೂರು: ಸ್ನೇಹಿತನ ಪರವಾಗಿ ಸಾಹುಕಾರ್ ನಡೆಸಿದ ಲಾಬಿ ವರ್ಕೌಟ್ ಆದಂತಿದೆ. ಎಂಎಲ್ಸಿ ಸಿ.ಪಿ. ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ.

ಹೆಚ್. ವಿಶ್ವನಾಥ್ ಗೆ ಮಂತ್ರಿ ಸ್ಥಾನ ತಪ್ಪಿದ ಬೆನ್ನಲ್ಲೇ ಇದೀಗ ಸಿ.ಪಿ. ಯೋಗೇಶ್ವರ್ ಗೆ ಮಂತ್ರಿ ಸ್ಥಾನ ಲಭ್ಯವಾಗಲಿದೆ. ಯೋಗೇಶ್ವರ್ ಅವರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವುದು ಖಚಿತ ಎಂದು ಹೇಳಿದರು. ಸಿ.ಪಿ.ಯೋಗೇಶ್ವರ್ ಚುನಾವಣೆಯಲ್ಲಿ ಸೋತರೂ ಕೂಡ ಅವರಿಗೆ ಮಂತ್ರಿ ಸ್ಥಾನ ನೀಡಲು ಬಿಜೆಪಿ ಹಲವು ನಾಯಕರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ವಿರೋಧದ ನಡುವೆಯೂ ಸಿಎಂ ಯಡಿಯೂರಪ್ಪ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...