alex Certify BREAKING NEWS: ಹಠಕ್ಕೆ ಬಿದ್ದು ಮುಷ್ಕರ ನಡೆಸಿದರೆ ಎಸ್ಮಾ ಜಾರಿ; 6ನೇ ವೇತನ ಆಯೋಗ ಜಾರಿ ಪ್ರಶ್ನೆಯೇ ಇಲ್ಲ ಎಂದ ಸಿಎಸ್ ರವಿಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಠಕ್ಕೆ ಬಿದ್ದು ಮುಷ್ಕರ ನಡೆಸಿದರೆ ಎಸ್ಮಾ ಜಾರಿ; 6ನೇ ವೇತನ ಆಯೋಗ ಜಾರಿ ಪ್ರಶ್ನೆಯೇ ಇಲ್ಲ ಎಂದ ಸಿಎಸ್ ರವಿಕುಮಾರ್

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಶೇ.8ರಷ್ಟು ವೇತನ ಹೆಚ್ಚಳ ಮಾಡಲು ಕೂಡ ಸರ್ಕಾರ ಸಿದ್ಧವಿದೆ. ಆದರೆ 6ನೇ ವೇತನ ಆಯೋಗ ಜಾರಿಮಾಡಲು ಸಾಧ್ಯವಿಲ್ಲ ಎಂದು ಮುಖ್ಯಕಾರ್ಯದರ್ಶಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಎಚ್ಚರಿಕೆ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್, ಶೇ.8ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದೇವೆ. ಲಾಕ್ ಡೌನ್ ವೇಳೆ ಸಾರಿಗೆ ಇಲಾಖೆಯಲ್ಲಿ ಹಣವೇ ಇರಲಿಲ್ಲ ಸರ್ಕಾರದ ಖಜಾನೆಯಿಂದ ಹಣ ತಂದು ನೌಕರರ ಸಂಬಳ ಪಾವತಿ ಮಾಡಿದ್ದೇವೆ. ಈಗಲೂ ಇಲಾಖೆಗೆ ಪ್ರತಿದಿನ 4 ಕೋಟಿ ನಷ್ಟವುಂಟಾಗುತ್ತಿದೆ. ಆದರೂ ಸಂಬಳ ಪಾವತಿ ಮಾಡುವುದನ್ನು ನಿಲ್ಲಿಸಿಲ್ಲ. ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಆದರೆ ಒಂದು ಬೇಡಿಕೆಯಾದ 6ನೇ ವೇತನ ಆಯೋಗ ಜಾರಿ ಮಾತ್ರ ಸಾಧ್ಯವಿಲ್ಲ ಎಂದರು.

ʼಜೀವ ವಿಮೆʼ ಖರೀದಿ ಮಾಡುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಈಗ ಸಂಬಳ ಹೆಚ್ಚಿಸಲು ಆಗಲ್ಲ. ಆದರೆ ಸಂಬಳ ಹೆಚ್ಚಿಸಲು ಸರ್ಕಾರ ಬದ್ಧ. ಕೋವಿಡ್ ನಿಯಮ ಉಲ್ಲಂಘಿಸಿಯೂ ನಾಳೆ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾದರೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ಆದರೆ ಸಂಧಾನದ ಪ್ರಶ್ನೆ ಇಲ್ಲ. ಹಠಕ್ಕೆ ಬಿದ್ದು ಪ್ರತಿಭಟನೆಗೆ ಮುಂದಾದರೆ ಎಸ್ಮಾ ಜಾರಿ ಮಾಡಲಾಗುವುದು. ಸಾರ್ವಜನಿಕರ ಪ್ರಯಾಣಕ್ಕೆ ಅಡ್ದಿಯುಂಟಾದರೆ, ತೊಂದರೆಯುಂಟಾದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...