alex Certify BIG NEWS: ಬಸ್ ಗೆ ಬೆಂಕಿ, ಪ್ರಯಾಣಿಕರು ಕೂಗಿದ್ರೂ ಚಾಲಕನ ನಿರ್ಲಕ್ಷ್ಯ – ಇಬ್ಬರು ಮಕ್ಕಳು ಸೇರಿ 5 ಮಂದಿ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸ್ ಗೆ ಬೆಂಕಿ, ಪ್ರಯಾಣಿಕರು ಕೂಗಿದ್ರೂ ಚಾಲಕನ ನಿರ್ಲಕ್ಷ್ಯ – ಇಬ್ಬರು ಮಕ್ಕಳು ಸೇರಿ 5 ಮಂದಿ ಸಜೀವ ದಹನ

ಚಿತ್ರದುರ್ಗ: ಖಾಸಗಿ ಬಸ್ ಗೆ ಬೆಂಕಿ ತಗುಲಿ ಐವರು ಸಜೀವ ದಹನವಾಗಿದ್ದಾರೆ. ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 5 ಮಂದಿ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೆಆರ್ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ದುರಂತ ಸಂಭವಿಸಿದೆ. ವಿಜಯಪುರದಿಂದ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 32 ಜನ ಪ್ರಯಾಣಿಸುತ್ತಿದ್ದರು. ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್ ಗೆ ವ್ಯಾಪಿಸಿ ಅವಘಡ ಉಂಟಾಗಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕುಕ್ಕೆಶ್ರೀ ಟ್ರಾವೆಲ್ಸ್ ಗೆ ಸೇರಿದ ಬಸ್ ಗೆ ಬೆಂಕಿ ತಗುಲಿ ಐವರು ಸಜೀವ ದಹನವಾಗಿದ್ದು, ಬಸ್ ಸುಟ್ಟು ಕರಕಲಾಗಿದೆ. ಬಸ್ ಚಾಲಕನ ಅಜಾಗರೂಕತೆಯಿಂದ ದುರಂತ ನಡೆದಿದೆ.. ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ವೇಳೆ ಜನ ಕೂಗಿದರೂ ಚಾಲಕ ನಿರ್ಲಕ್ಷ್ಯ ತೋರಿದ್ದಾನೆ. ಬೆಂಕಿ ಹೆಚ್ಚಾದಾಗ ಬಸ್ ನಿಂದ ಹಾರಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಬೆಂಕಿ ಬಸ್ ಗೆ ವ್ಯಾಪಿಸಿ ಅನೇಕರು ಹೊರಗೆ ಬಂದಿದ್ದಾರೆ. ಉಳಿದವರಿಗೆ ಬರಲು ಸಾಧ್ಯವಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...