alex Certify ಊರಿಗೆ ಹೋಗುವವರಿಗೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಊರಿಗೆ ಹೋಗುವವರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ಡೌನ್ ಜಾರಿಯಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಬಸ್ ಸಂಚಾರ ನಾಳೆಯಿಂದ ಆರಂಭವಾಗಲಿದೆ. ಹಸಿರು ವಲಯದ ಜಿಲ್ಲೆಗಳಲ್ಲಿ ನಾಳೆಯಿಂದಲೇ ಬಸ್ ಸಂಚಾರ ಶುರುವಾಗಲಿದೆ.

ಜಿಲ್ಲೆಯ ಒಳಗೆ ಸರ್ಕಾರಿ ಬಸ್ ಸೇವೆ ಒದಗಿಸಲು ಅನುಮತಿ ನೀಡಲಾಗಿದ್ದು, ಪ್ರಯಾಣಿಕರಿಗೆ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ, ಕೋಲಾರ, ಚಾಮರಾಜನಗರ, ಹಾವೇರಿ, ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಶೇಕಡ 50 ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ವೈಯಕ್ತಿಕ ಅಂತರ, ಮಾಸ್ಕ್ ಧರಿಸುವುದು, ಥರ್ಮಲ್ ಪರೀಕ್ಷೆ ಮತ್ತು ಬಸ್ ಗಳಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರ ಮಾಹಿತಿಯನ್ನು ಸಂಗ್ರಹಿಸುವುದು ಸೇರಿದಂತೆ ಹಲವು ನಿಯಮಗಳನ್ನು ಪಾಲಿಸಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...