ಬೆಂಗಳೂರು: ಲಾಕ್ ಡೌನ್ ಜಾರಿ ಮಾಡಿದ್ದರಿಂದ ಸ್ಥಗಿತಗೊಂಡಿದ್ದ ಸಂಚಾರವನ್ನು ಪುನರಾರಂಭಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿದ್ಧತೆ ಕೈಗೊಂಡಿದೆ.
ಈಗಾಗಲೇ ರಸ್ತೆ ಸಾರಿಗೆ ನಿಗಮಗಳಿಂದ ಸಿದ್ಧತೆ ಕೈಗೊಳ್ಳಲಾಗಿದ್ದು, ಸೋಮವಾರದಿಂದ ವಿವಿಧ ಕಡೆಗಳಿಗೆ ಬಸ್ ಸಂಚಾರ ಆರಂಭವಾಗಲಿದೆ. ಈಗಾಗಲೇ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬಸ್ ಸಂಚಾರ ಶುರುವಾಗಿದ್ದು ಸೋಮವಾರದಿಂದ ನಿರ್ದಿಷ್ಟ ಸ್ಥಳಗಳಿಗೆ ಬಸ್ ಸಂಚಾರ ಪುನರಾರಂಭವಾಗಲಿದೆ.
ಮಂಗಳವಾರದಿಂದ ನಿರ್ದಿಷ್ಟ ಸ್ಥಳಗಳಿಗೆ ಪ್ರಯಾಣಿಕರ ರೈಲು ಸಂಚಾರ ಆರಂಭವಾಗಿದೆ. ಹಂತ ಹಂತವಾಗಿ ರೈಲು ಸಂಚಾರ ಹೆಚ್ಚಳವಾಗಲಿದೆ. ಮೇ 17ರ ನಂತರ ದೇಶೀಯ ವಿಮಾನ ಸಂಚಾರ ಆರಂಭಿಸುವ ಸಾಧ್ಯತೆ ಇದ್ದು ಈಗಾಗಲೇ ವಿಮಾನಯಾನ ಸಚಿವಾಲಯದಿಂದ ನಿಯಮಾವಳಿಗಳನ್ನು ಸಿದ್ದಪಡಿಸಲಾಗಿದೆ. 80 ವರ್ಷ ಮೇಲ್ಪಟ್ಟವರು ಪ್ರಯಾಣ ಮಾಡುವಂತಿಲ್ಲ ಎಂಬುದು ಸೇರಿದಂತೆ ಹಲವು ನಿಯಮಗಳನ್ನು ರೂಪಿಸಲಾಗಿದೆ.