alex Certify ಉಪನ್ಯಾಸಕರ ನೇಮಕಾತಿ, ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ‌ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪನ್ಯಾಸಕರ ನೇಮಕಾತಿ, ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ‌ʼಗುಡ್ ನ್ಯೂಸ್ʼ

ಬೆಂಗಳೂರು: ಪದವಿ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆಗೆ ಈಗಿರುವ ಕಾನೂನು ರದ್ದುಗೊಳಿಸಿ, ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಉನ್ನತ ಶಿಕ್ಷಣದ ಪಠ್ಯಕ್ರಮ, ಪರೀಕ್ಷೆ, ಆನ್‌ಲೈನ್‌ ಶಿಕ್ಷಣ, ಉಪನ್ಯಾಸಕರ ವರ್ಗಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರೊಂದಿಗೆ ಗುರುವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ 3-4 ವರ್ಷಗಳಿಂದ ಉಪನ್ಯಾಸಕರ ವರ್ಗಾವಣೆ ಆಗಿಲ್ಲ. ಹಾಗಾಗಿ ಈ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ಉಪನ್ಯಾಸಕರ ವರ್ಗಾವಣೆಯ ಈಗಿನ ಕಾನೂನು ರದ್ದುಪಡಿಸಿ ಹೊಸ ನಿಯಮಗಳನ್ನು ಅನುಷ್ಠಾನಕ್ಕೆ ತರಲಾಗುವುದು. ವರ್ಗಾವಣೆ ಕುರಿತು ಕರಡು ನಿಯಮ ರೂಪಿಸಿ ಉಪನ್ಯಾಸಕರ ಸಂಘದವರಿಗೆ  ಕಳುಹಿಸಲಾಗುವುದು. ಜತೆಗೆ ಸಂಬಂಧ ಪಟ್ಟ ಎಲ್ಲರಿಗೂ ಕಳುಹಿಸಿ, ಅವರಿಂದ ಸಲಹೆಗಳನ್ನು ಪಡೆಯಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ಕಾನೂನು ತಿದ್ದುಪಡಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಹೊಸ ಉಪನ್ಯಾಸಕರ ಹಾಗೂ ಪ್ರಾಂಶುಪಾಲರ ನೇಮಕ ತಕ್ಷಣ ಆಗಬೇಕೆಂದು ವಿಧಾನಪರಿಷತ್‌ ಸದಸ್ಯರು ಒತ್ತಾಯಿಸಿದ್ದಾರೆ. ಈ ಸಂಬಂಧ ಅಧಿಸೂಚನೆ ಹೊರಡಿಸಿ, ನೇಮಕಕ್ಕೆ ಸೂಕ್ತ ಕ್ರಮ ವಹಿಸಲಾಗುವುದು. ಶೈಕ್ಷಣಿಕ ವರ್ಷ ಪ್ರಾರಂಭವಾಗುವ ವೇಳೆಗೆ ಉಪನ್ಯಾಸಕರ ಹಾಗೂ ಪ್ರಾಂಶುಪಾಲರ ನೇಮಕ ಆಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...