ಬೆಂಗಳೂರು: ಬಡ ಕಲಾವಿದರ ಖಾತೆಗೆ ಸರ್ಕಾರದ ವತಿಯಿಂದ 2000 ರೂಪಾಯಿ ಹಣವನ್ನು ಜಮಾ ಮಾಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆ ಸಚಿವ ಸಿ.ಟಿ. ರವಿ ಮಾಹಿತಿ ನೀಡಿದ್ದಾರೆ.
ಬಡ ಕಲಾವಿದರ ನೆರವಿಗೆ ಸರ್ಕಾರ ಸ್ಪಂದಿಸುತ್ತಿದ್ದು, ಮುಖ್ಯಮಂತ್ರಿಯವರಿಗೆ ಮನವಿ ಮಾಡಿ ಎರಡು ಕೋಟಿ ರೂಪಾಯಿ ಬಿಡುಗಡೆ ಮಾಡಿಸಲಾಗಿದೆ. ಬಡ ಕಲಾವಿದರ ಖಾತೆಗೆ ತಲಾ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಖಾತೆ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ಸರಿಯಾಗಿ ನೀಡಿದ ಕಲಾವಿದರ ಖಾತೆಗೆ ಹಣ ಸಂದಾಯವಾಗುತ್ತಿದೆ. ಉಳಿದ ಕಲಾವಿದರ ದಾಖಲೆ ಪರಿಶೀಲನೆ ಮಾಡಿ ಹಣ ಹಾಕಲಾಗುವುದು ಎಂದು ಹೇಳಿದ್ದಾರೆ. ಅಂದ ಹಾಗೆ, ಸಚಿವರು ಹೋಮ್ ಕ್ವಾರಂಟೈನ್ ನಲ್ಲಿ ಇದ್ದಾರೆ.