alex Certify ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಶಾಕಿಂಗ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಉಪ ಚುನಾವಣೆ ಮುಗಿಯುವವರೆಗೆ ಸಚಿವ ಸ್ಥಾನ ಆಕಾಂಕ್ಷಿಗಳು ಕಾಯಬೇಕಿದೆ. ಈಗ ಸಂಪುಟ ಪುನಾರಚನೆ ಮಾಡಿದಲ್ಲಿ ಚುನಾವಣೆಯ ಮೇಲೆ ಪರಿಣಾಮ ಬೀರುವುದರಿಂದ ಸದ್ಯಕ್ಕೆ ಸಂಪುಟ ವಿಸ್ತರಣೆಗೆ ಬ್ರೇಕ್ ಹಾಕಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಗಮನಹರಿಸಲಾಗುತ್ತಿದೆ.

ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪ ಚುನಾವಣೆ ಘೋಷಣೆಯಾಗಿದ್ದು ಅಕ್ಟೋಬರ್ 28ಕ್ಕೆ ಎರಡು ಪದವೀಧರ ಕ್ಷೇತ್ರ ಮತ್ತು 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಈಗ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡಿದಲ್ಲಿ ಸಚಿವ ಸ್ಥಾನ ಸಿಗದವರು ಅಸಮಾಧಾನಗೊಳ್ಳಲಿದ್ದು, ಉಪ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಚುನಾವಣೆ ಬಳಿಕ ಸಂಪುಟ ಪುನಾರಚನೆ ಇಲ್ಲವೇ ವಿಸ್ತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...