ನವದೆಹಲಿ: ಕೊರೋನಾ ನಿಯಂತ್ರಣ ಸಂಬಂಧಿತ ಕಾರ್ಯಗಳಿಗೆ 15,000 ಕೋಟಿ ರೂಪಾಯಿ ನೀಡಲು ಕೇಂದ್ರ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊರೋನಾ ತುರ್ತು ಸ್ಪಂದನೆಗೆ, ಆರೋಗ್ಯ ವ್ಯವಸ್ಥೆ ಸಿದ್ಧಗೊಳಿಸಲು 15,000 ಕೋಟಿ ರೂಪಾಯಿ ನೀಡಲು ಒಪ್ಪಿಗೆ ನೀಡಲಾಗಿದೆ. ಈ ಹಣವನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ತುರ್ತಾಗಿ 7774 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಿದ್ದು ಉಳಿದ ಹಣವನ್ನು ಮುಂದಿನ ನಾಲ್ಕು ವರ್ಷಗಳಲ್ಲಿ ಬಿಡುಗಡೆ ಮಾಡಲಾಗುವುದು. ಆಸ್ಪತ್ರೆ ಮೂಲಸೌಕರ್ಯ ನಿರ್ಮಾಣಕ್ಕೆ ಬಳಕೆ ಮಾಡಲಾಗುವುದು. ಅದೇ ರೀತಿ ಪೋಷಕಾಂಶಗಳ ರಸಗೊಬ್ಬರ ಸಬ್ಸಿಡಿಗೆ 22,186 ಕೋಟಿ ರೂಪಾಯಿ ನೀಡಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.