alex Certify ಮಂಗಳವಾರ ರಾತ್ರಿ ನಡೆದ ಘಟನೆಗೆ ಬೆಚ್ಚಿಬಿದ್ದ ಗುಂಡ್ಲುಪೇಟೆ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳವಾರ ರಾತ್ರಿ ನಡೆದ ಘಟನೆಗೆ ಬೆಚ್ಚಿಬಿದ್ದ ಗುಂಡ್ಲುಪೇಟೆ ಜನ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಮೂವರು ಕೊಲೆಯಾಗಿದ್ದಾರೆ.

ಇದ್ರಿಸ್, ಕೈಸರ್, ಜಕಾವುಲ್ಲಾ ಕೊಲೆಯಾದವರು ಎಂದು ಹೇಳಲಾಗಿದೆ. ಪುರಸಭೆ ಸದಸ್ಯ ನೂರುಲ್ಲಾ ಗುಂಪಿನ ಕಡೆಯವರಾದ ಈ ಮೂವರು ಮತ್ತು ಮತ್ತೊಂದು ಗುಂಪಿನ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ ನಡೆದಿದ್ದು ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ.

ಈ ಹಿಂದೆಯೂ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳವಾರ ಮತ್ತೆ ಗಲಾಟೆ ನಡೆದಿದೆ. ಮಾರಕಾಸ್ತ್ರಗಳಿಂದ ಥಳಿಸಿ ಮೂವರನ್ನು ಕೊಲೆ ಮಾಡಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...