ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಮೂವರು ಕೊಲೆಯಾಗಿದ್ದಾರೆ.
ಇದ್ರಿಸ್, ಕೈಸರ್, ಜಕಾವುಲ್ಲಾ ಕೊಲೆಯಾದವರು ಎಂದು ಹೇಳಲಾಗಿದೆ. ಪುರಸಭೆ ಸದಸ್ಯ ನೂರುಲ್ಲಾ ಗುಂಪಿನ ಕಡೆಯವರಾದ ಈ ಮೂವರು ಮತ್ತು ಮತ್ತೊಂದು ಗುಂಪಿನ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ ನಡೆದಿದ್ದು ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ.
ಈ ಹಿಂದೆಯೂ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳವಾರ ಮತ್ತೆ ಗಲಾಟೆ ನಡೆದಿದೆ. ಮಾರಕಾಸ್ತ್ರಗಳಿಂದ ಥಳಿಸಿ ಮೂವರನ್ನು ಕೊಲೆ ಮಾಡಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.