alex Certify ಹತ್ಯೆ ಸುದ್ದಿ ಕೇಳಿ ಬೆಚ್ಚಿ ಬಿದ್ದ ಜನ: ತಾಯಿಯನ್ನೇ ಕೊಂದು ಶವದ ಜೊತೆಯಲ್ಲೇ ಇದ್ದ ಪುತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹತ್ಯೆ ಸುದ್ದಿ ಕೇಳಿ ಬೆಚ್ಚಿ ಬಿದ್ದ ಜನ: ತಾಯಿಯನ್ನೇ ಕೊಂದು ಶವದ ಜೊತೆಯಲ್ಲೇ ಇದ್ದ ಪುತ್ರ

ಚಿಕ್ಕಮಗಳೂರು: ನಗರದ ಗೌರಿ ಕಾಲುವೆಯಲ್ಲಿ ನಡೆದ ಹತ್ಯೆ ಪ್ರಕರಣ ನಗರವನ್ನೇ ಬೆಚ್ಚಿಬೀಳಿಸಿದೆ. 28 ವರ್ಷದ ಯುವಕನೊಬ್ಬ ತಾಯಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

48 ವರ್ಷದ ಸುಧಾ ಮೃತಪಟ್ಟವರು ಎಂದು ಹೇಳಲಾಗಿದೆ. ಸುಧಾ ಅವರ ಹಿರಿಯ ಪುತ್ರ ದುಶ್ಯಂತ್(28) ಕೊಲೆ ಆರೋಪಿಯಾಗಿದ್ದಾನೆ. ಬುಧವಾರ ಮಧ್ಯಾಹ್ನ ತಾಯಿಯನ್ನು ಹತ್ಯೆ ಮಾಡಿದ ಆರೋಪಿ ಸಂಜೆಯವರೆಗೂ ಶವದ ಜೊತೆಯಲ್ಲಿ ಕಾಲ ಕಳೆದಿದ್ದಾನೆ. ಸಂಜೆ ಕೆಲಸ ಮುಗಿಸಿ ಮನೆಗೆ ಬಂದ ಕಿರಿಯ ಪುತ್ರ ಸಂತೋಷ್ ಮನೆಯಲ್ಲಿ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಕಿರುಚಾಡಿದ್ದಾನೆ. ಆದರೆ, ಈ ವೇಳೆಗಾಗಲೇ ಸುಧಾ ಮೃತಪಟ್ಟಿರುವುದು ಗೊತ್ತಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಬಸವನಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸುಧಾ ಅವರ ಪತಿ ನಿಧನರಾಗಿದ್ದು, ಸುಧಾ ಪ್ರಾವಿಷನ್ ಸ್ಟೋರ್ ವೊಂದರಲ್ಲಿ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕಿ ಸಲಹಿದ್ದಾರೆ. ಸಂತೋಷ್ ಇಂಜಿನಿಯರ್ ಓದಿದ್ದು, ತಾಯಿಗೆ ನೆರವಾಗ್ತಿದ್ದ. ದುಶ್ಯಂತ್ ಅಬ್ನಾರ್ಮಲ್ ವರ್ತನೆ ತೋರಿದ್ದು ಆಸ್ಪತ್ರೆ, ದೇವಾಲಯಗಳಿಗೆ ಸುಧಾ ಕರೆದುಕೊಂಡು ಹೋಗುತ್ತಿದ್ದರು. ನಿನ್ನೆ ಮಧ್ಯಾಹ್ನ ಕೆಲಸಕ್ಕೆ ಹೋಗದೆ ಆತನನ್ನು ದೇವಾಲಯಕ್ಕೆ ಕರೆದುಕೊಂಡು ಹೋಗಿ ಮನೆಗೆ ಬಂದಿದ್ದಾರೆ. ನಂತರದಲ್ಲಿ ತಾಯಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...