alex Certify ʼಕೊರೊನಾʼ ನಿಯಂತ್ರಣಕ್ಕೆ ಜನತೆ ಬಳಿ ಸಹಕಾರ ಕೋರಿದ ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼ ನಿಯಂತ್ರಣಕ್ಕೆ ಜನತೆ ಬಳಿ ಸಹಕಾರ ಕೋರಿದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಮೇ 10 ನೇ ತಾರೀಖಿನಿಂದ ಮೇ 24ರ ವರೆಗೆ ಲಾಕ್​ಡೌನ್​ ಆದೇಶವನ್ನ ಹೊರಡಿಸಿದೆ. ಇನ್ನು ಈ ವಿಚಾರವಾಗಿ ಮಾತನಾಡಿದ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ ಎಂದು ಹೇಳಿದ್ದಾರೆ.

ಕೊರೊನಾ ಎರಡನೇ ಅಲೆಯನ್ನ ನಿಯಂತ್ರಿಸಲು ಜನರ ಸಹಕಾರ ಅತ್ಯಗತ್ಯ. ಜನ ಮಾಸ್ಕ್​ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡಲ್ಲಿ ಮಾತ್ರ ಸೋಂಕನ್ನ ಕಂಟ್ರೋಲ್​ ಮಾಡಬಹುದು ಎಂದು ಸಿಎಂ ಹೇಳಿದ್ರು.

ಇನ್ನು ಇದೇ ವೇಳೆ ಕೇಂದ್ರ ಸರ್ಕಾರದ ಬಳಿ ನೆರವು ಕೇಳಲು ದೆಹಲಿಗೆ ಭೇಟಿ ನೀಡುವ ವಿಚಾರವಾಗಿಯೂ ಮಾತನಾಡಿದ ಅವರು, ಪ್ರಧಾನಿ ಮೋದಿ ನನ್ನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಹೀಗಾಗಿ ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ಈಗಾಗಲೇ ಜೆಮ್​ಶೆಡ್​ಪುರದಿಂದ ಆಕ್ಸಿಜನ್​ಗಳನ್ನ ಕಳುಹಿಸಿಕೊಟ್ಟಿದೆ. ರಾಜ್ಯ ಸರ್ಕಾರದ ಬೇಡಿಕೆಗಳಿಗೆ ಪ್ರಧಾನಿ ಮೋದಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...