alex Certify ರಾಜ್ಯ ಬಿಜೆಪಿಯಲ್ಲಿ ಅನಿರೀಕ್ಷಿತ ಬೆಳವಣಿಗೆ, ಸಿಎಂ ಬದಲಾವಣೆಗೆ ಒತ್ತಡ: BSY ಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಬಿಜೆಪಿಯಲ್ಲಿ ಅನಿರೀಕ್ಷಿತ ಬೆಳವಣಿಗೆ, ಸಿಎಂ ಬದಲಾವಣೆಗೆ ಒತ್ತಡ: BSY ಗೆ ಬಿಗ್ ಶಾಕ್

ಕತ್ತಿ ಬ್ರದರ್ಸ್ ಅಸಮಾಧಾನ ಬಿಜೆಪಿಯಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ. ರಮೇಶ್ ಕತ್ತಿ ಅವರನ್ನು ರಾಜ್ಯಸಭೆಗೆ ಕಳುಹಿಸಬೇಕು. ಇಲ್ಲದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಅದೇ ರೀತಿ ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು ಆಡಳಿತ ಪಕ್ಷದ ಕೆಲವು ಶಾಸಕರು ಸಭೆ ನಡೆಸಿರುವುದು ರಾಜ್ಯ ಬಿಜೆಪಿಯಲ್ಲಿ ಮಾತ್ರವಲ್ಲ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ನಡೆದಿರುವ ಅನಿರೀಕ್ಷಿತ ಬೆಳವಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಚಿಂತೆಗೀಡುಮಾಡಿದೆ. ಅಸಮಾಧಾನ ಶಮನಕ್ಕೆ ಅವರು ಕ್ರಮಕೈಗೊಂಡಿದ್ದಾರೆ.

ಭೋಜನಕೂಟದ ನೆಪದಲ್ಲಿ ಸಭೆ ಸೇರಿ ಚರ್ಚೆ ನಡೆಸಿರುವ ಶಾಸಕರು, ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದರೆ ಮುಖ್ಯಮಂತ್ರಿಯವರನ್ನು ಬದಲಾಯಿಸಬೇಕು ಎನ್ನುವ ಬೇಡಿಕೆಯನ್ನು ಇಟ್ಟಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಮೇಶ್ ಕತ್ತಿ ಅವರಿಗೆ ಟಿಕೆಟ್ ಕೈತಪ್ಪಿದ್ದು ಈಗ ರಾಜ್ಯಸಭೆ ಟಿಕೆಟ್ ಗಾಗಿ ಬೇಡಿಕೆ ಇಡಲಾಗಿದೆ. ರಾಜ್ಯಸಭೆ ಟಿಕೆಟ್ ಗೆ ಪ್ರಭಾಕರ ಕೋರೆ ಮತ್ತು ಹೆಚ್. ವಿಶ್ವನಾಥ್ ಕೂಡ ಆಕಾಂಕ್ಷಿಗಳಾಗಿದ್ದು, ಯಾರೊಬ್ಬರಿಗೂ ನೀಡಿದರೂ ಉಳಿದವರು ಅಸಮಾಧಾನಗೊಳ್ಳುವುದು ನಿಶ್ಚಿತ. ಈ ನಿಟ್ಟಿನಲ್ಲಿ ಪಕ್ಷದ ನಾಯಕರು ಯಾವ ಹೆಜ್ಜೆ ಇಡಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...