alex Certify ಸಿಎಂ ಯಡಿಯೂರಪ್ಪ ಚೇತರಿಕೆಗೆ ಸಿದ್ಧರಾಮಯ್ಯ ಹಾರೈಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಯಡಿಯೂರಪ್ಪ ಚೇತರಿಕೆಗೆ ಸಿದ್ಧರಾಮಯ್ಯ ಹಾರೈಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಎಂ ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಶೀಘ್ರ ಗುಣಮುಖರಾಗಿ ಆರೋಗ್ಯದೊಂದಿಗೆ ಜನರಿಗಾಗಿ ನಿಮ್ಮ ಕೆಲಸ ಮುಂದುವರೆಸಲು ವಾಪಸಾಗುವಂತೆ ಹಾರೈಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿ, ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿದೆ ಎನ್ನುವ ಸುದ್ದಿ ಕೇಳಿ ಬೇಸರವಾಗಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಸಿಎಂ ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ ಪ್ರಾರ್ಥನೆಗಳು ನಿಮ್ಮೊಂದಿಗೆ ಇದೆ. ಶೀಘ್ರ ಚೇತರಿಸಿಕೊಂಡು ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...