alex Certify ಸಂಪುಟ ಸಹೋದ್ಯೋಗಿಗಳೊಂದಿಗೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟ ಸಹೋದ್ಯೋಗಿಗಳೊಂದಿಗೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ವಿರೋಧಪಕ್ಷಗಳು ಹಲವು ಅಸ್ತ್ರಗಳೊಂದಿಗೆ ಸರ್ಕಾರದ ಚಳಿ ಬಿಡಿಸಲು ಸನ್ನದ್ಧವಾಗಿವೆ. ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪೂರ್ವ ತಯಾರಿ ನಡೆಸಿದ್ದಾರೆ. ಸಂಪುಟ ಸಹೋದ್ಯೋಗಿಗಳೊಂದಿಗೆ ಇವತ್ತು ಸಂಜೆ ಸಿಎಂ ವಿಶೇಷ ಸಭೆ ನಡೆಸಲಿದ್ದಾರೆ.

ಸೆಪ್ಟೆಂಬರ್ 21 ರ ಸೋಮವಾರದಿಂದ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದೆ. ಅಧಿವೇಶನದಲ್ಲಿ ಮಹತ್ವದ ಸುಗ್ರಿವಾಜ್ಞೆಗಳಿಗೆ ಸರ್ಕಾರದ ಒಪ್ಪಿಗೆ ಪಡೆಯಬೇಕಿದೆ. ಈ ನಡುವೆ ಡಿಜೆ ಹಳ್ಳಿ ಗಲಭೆ ಪ್ರಕರಣ, ಆರೋಗ್ಯ ಇಲಾಖೆಯಿಂದ ಕೋವಿಡ್ ಸಾಮಗ್ರಿ ಖರೀದಿ, ಜಿಎಸ್ಟಿ ಸಂಗ್ರಹ, ಭೂ ಸುಧಾರಣೆ ಕಾಯ್ದೆ ಮೊದಲಾದ ವಿಷಯಗಳ ಬಗ್ಗೆ ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ.

ಇನ್ನು ಸಂಪುಟ ವಿಸ್ತರಣೆ ಕೂಡ ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ಸಿಎಂ ಸಂಪುಟ ಸಹೋದ್ಯೋಗಿಗಳೊಂದಿಗೆ ಇವತ್ತು ಸಮಾಲೋಚನೆ ನಡೆಸಲಿದ್ದಾರೆ. ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší