ಬೆಂಗಳೂರು: ಕೂಲಿ ಕಾರ್ಮಿಕರು, ಕೊಳಗೇರಿ ನಿವಾಸಿಗಳು ಮತ್ತು ನಿರಾಶ್ರಿತರ ಕುಟುಂಬಗಳಿಗೆ ಪ್ರತಿ ದಿನ ಒಂದು ಲೀಟರ್ ಹಾಲು ಏಪ್ರಿಲ್ 30ರ ವರೆಗೂ ಉಚಿತವಾಗಿ ವಿತರಿಸಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಈಗಾಗಲೇ ಉಚಿತವಾಗಿ ಹಾಲು ವಿತರಿಸುತ್ತಿದ್ದು, ಏಪ್ರಿಲ್ 30 ರವರೆಗೆ ಹಾಲು ವಿತಣೆ ಮುಂದುವರೆಸಲು ತೀರ್ಮಾನಿಸಲಾಗಿದೆ.
ಮೇ 3 ರವರೆಗೆ ಲಾಕ್ಡೌನ್ ಜಾರಿಯಲ್ಲಿದೆ. ಹಾಲು ಒಕ್ಕೂಟಗಳಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲು ವಿಲೇವಾರಿ ಕಷ್ಟವಾಗಿದೆ. ಹೆಚ್ಚುವರಿ ಹಾಲನ್ನು ಸರ್ಕಾರದಿಂದಲೇ ಖರೀದಿಸಿ ಉಚಿತವಾಗಿ ವಿತರಿಸಲಾಗುತ್ತದೆ. ಪ್ರತಿದಿನ ಲೀಟರ್ ಗೆ 37 ರೂಪಾಯಿಯಂತೆ ಖರೀದಿಸಿ ಕಟ್ಟಡ ಕಾರ್ಮಿಕರ ವಸತಿ ತಾಣಗಳಲ್ಲಿ, ಸ್ಲಂಗಳು, ವಲಸೆ ಕಾರ್ಮಿಕರು ಇರುವೆಡೆ ಉಚಿತವಾಗಿ ವಿತರಿಸಲಾಗುತ್ತದೆ.