ಬೆಂಗಳೂರು: ಲಾಕ್ ಡೌನ್ ಜಾರಿಯಾಗಿದ್ದರಿಂದ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕವರ್ಗದವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶೇಷ ಪ್ಯಾಕೇಜ್ ನೀಡಿದ್ದಾರೆ.
ಕಾರ್ಮಿಕರು, ಚಾಲಕರು ಸೇರಿದಂತೆ ಶ್ರಮಿಕ ವರ್ಗದವರಿಗೆ 5 ಸಾವಿರ ರೂ. ನೀಡಲಾಗುವುದು. 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 26.45 ಲಕ್ಷ ಜನರಿಗೆ ನೆರವು ನೀಡಿದ್ದಾರೆ.
7.75 ಲಕ್ಷ ಆಟೋ, ಟ್ಯಾಕ್ಸಿ ಚಾಲಕರಿಗೆ ತಲಾ 5 ಸಾವಿರ ರೂಪಾಯಿ ಸಿಗಲಿದೆ. ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ 387.5 ಕೋಟಿ ರೂಪಾಯಿ ನೀಡಲಾಗುವುದು. ಮಡಿವಾಳ ಸಮುದಾಯದವರಿಗೆ ತಲಾ 5 ಸಾವಿರ ರೂಪಾಯಿ ನೀಡಲಾಗುವುದು. ಕ್ಷೌರಿಕರಿಗೂ ತಲಾ 5 ಸಾವಿರ ರೂ. ನೆರವು ಘೋಷಿಸಲಾಗಿದೆ. ಕಾರ್ಮಿಕರಿಗೆ ಈಗಾಗಲೇ 2,000 ರೂಪಾಯಿ ಘೋಷಣೆಯಾಗಿದ್ದು, ಹೆಚ್ಚುವರಿಯಾಗಿ 3 ಸಾವಿರ ರೂ. ನೀಡಲಾಗುವುದು.