ಬೆಂಗಳೂರು: ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಮಾಲೋಚನೆ ನಡೆಸಿದ್ದಾರೆ.
ಸಂವಾದದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸದ್ಯಕ್ಕೆ ವಿಮಾನಯಾನ ಬೇಡವೆಂದು ಮನವಿ ಮಾಡಿದ್ದಾರೆ.
ನಾನ್ ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳನ್ನು ತೆರೆಯಲು ಅನುಮತಿ ನೀಡಬೇಕು. ಟೆಲಿಮೆಡಿಸಿನ್ ಹೆಚ್ಚಾಗಬೇಕು ಎಂದು ಸಿಎಂ ಬಿ.ಎಸ್.ವೈ. ಸಲಹೆ ನೀಡಿದ್ದಾರೆ. ಮಾಲ್, ಸಿನಿಮಾ, ಹೋಟೆಲ್ ಇನ್ನು ಕೆಲವು ದಿನ ಬಂದ್ ಮಾಡಬೇಕು. 60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷ ಕೆಳಗಿನವರು ಇನ್ನೂ ಕೆಲವು ದಿನ ಮನೆಯಲ್ಲಿಯೇ ಉಳಿಯುವಂತೆ ಮಾಡಬೇಕು ಎಂದು ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾಸ್ಕ್ ಕಡ್ಡಾಯಗೊಳಿಸಬೇಕೆಂದು ಸಲಹೆ ನೀಡಿದ್ದು ರಾಜ್ಯಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲವೆನ್ನಲಾಗಿದೆ. ಸುಮಾರು 20 ನಿಮಿಷಗಳ ಕಾಲ ಸಿಎಂ ಸಂವಾದದಲ್ಲಿ ಭಾಗಿಯಾಗಿದ್ದು ಅಂತರರಾಷ್ಟ್ರೀಯ ಸಂಚಾರಕ್ಕೆ ಮೇ ತಿಂಗಳ ಅಂತ್ಯದವರೆಗೂ ನಿರ್ಬಂಧ ಮುಂದುವರಿಸುವ ಜೊತೆಗೆ ರೈಲು ಸಂಚಾರಕ್ಕೆ ನಿರ್ಬಂಧ ಹೇರಬೇಕು. ಅಂತರರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.