alex Certify ರಾಜ್ಯಕ್ಕೆ ವಿದೇಶದಿಂದ ಬರಲಿದೆ ರೆಮಿಡಿಸಿವರ್: ಟಾಸ್ಕ್​ ಫೋರ್ಸ್ ಸಭೆಯಲ್ಲಿ ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ವಿದೇಶದಿಂದ ಬರಲಿದೆ ರೆಮಿಡಿಸಿವರ್: ಟಾಸ್ಕ್​ ಫೋರ್ಸ್ ಸಭೆಯಲ್ಲಿ ಮಹತ್ವದ ನಿರ್ಧಾರ

ರಾಜ್ಯದಲ್ಲಿ ರೆಮಿಡಿಸಿವರ್​ ಹಾಗೂ ವೈದ್ಯಕೀಯ ಆಮ್ಲಜನಕದ ಅಭಾವ ಉಂಟಾಗಿರುವ ಹಿನ್ನೆಲೆ ಡಿಸಿಎಂ ಅಶ್ವತ್ಥ ನಾರಾಯಣ್​ ನೇತೃತ್ವದಲ್ಲಿ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್​ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಟಾಸ್ಕ್​ ಫೋರ್ಸ್ ಸಭೆಯಲ್ಲಿ ರಾಜ್ಯದಲ್ಲಿ ಕೊರೊನಾ ನಿರ್ವಹಣೆ ಕುರಿತಂತೆ ಹಲವು ಮಹತ್ವದ ಕ್ರಮಗಳನ್ನ ಕೈಗೊಳ್ಳಲಾಗಿದ್ದು ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಲಾಗುವುದು ಎಂದು ಡಾ. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸಭೆಯಲ್ಲಿ ಮಾತನಾಡಿದ ಡಾ. ಅಶ್ವತ್ಥ ನಾರಾಯಣ್​, ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನರ್​ ಬೆಡ್​ಗೆ 1000 ರೂಪಾಯಿ ಜಾಸ್ತಿ ಮಾಡಲಾಗಿದೆ. ಇನ್ನು ಐಸಿಯು ಹಾಗೂ ವೆಂಟಿಲೇಟರ್​ ಬೆಡ್​ಗೆ 1500 ರೂಪಾಯಿ ಹೆಚ್ಚಿಸಲಾಗಿದೆ. ಲಸಿಕೆ ಬಗ್ಗೆಯೂ ಸಾಕಷ್ಟು ಚರ್ಚೆಯನ್ನ ನಡೆಸೋದಿದೆ. ಔಷಧಿಗಳನ್ನ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕೊಂಡುಕೊಳ್ಳಬೇಕು. ಈ ಬಗ್ಗೆ ಸೂಕ್ತ ಮಾಹಿತಿ ನೀಡುವಂತೆ ತಾಂತ್ರಿಕ ಸಲಹಾ ಸಮಿತಿಯನ್ನ ಕೇಳಲಾಗಿದೆ ಎಂದು ಹೇಳಿದ್ರು.

ಇನ್ನು ರೆಮಿಡಿಸಿವರ್​ ವಿಚಾರವಾಗಿಯೂ ಮಾತನಾಡಿದ ಅವರು 5 ಲಕ್ಷ ರೆಮಿಡಿಸಿವರ್​ ಚುಚ್ಚು ಮದ್ದುಗಳನ್ನ ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತೆ. ಟೆಂಡರ್​ ಕರೆದ ಬಳಿಕ ವಿದೇಶದಿಂದ ರೆಮಿಡಿಸಿವರ್​​ನ್ನು ಆಮದು ಮಾಡಿಕೊಳ್ಳಲಾಗುತ್ತೆ. ಹಾಗೂ ರಾಜ್ಯದಲ್ಲಿ 1912 ಸಹಾಯವಾಣಿ ಸಂಖ್ಯೆಯನ್ನ ಹೆಚ್ಚಿಸಲಿದ್ದೇವೆ ಎಂದು ಹೇಳಿದ್ರು.

ಖಾಸಗಿ ಆಸ್ಪತ್ರೆಯಲ್ಲಿ ಹಣ ವಸೂಲಿ ವಿಚಾರವಾಗಿಯೂ ಮಾತನಾಡಿದ ಅಶ್ವತ್ಥ ನಾರಾಯಣ್​, ಇಂತಹ ಸಮಸ್ಯೆಗಳು ಕಂಡು ಬಂದಲ್ಲಿ 112ಗೆ ಕರೆ ಮಾಡಿ ತಕ್ಷಣ ದೂರನ್ನ ನೀಡಿ. ದೂರು ನೀಡಿದ ಬಳಿಕ ಸರ್ಕಾರ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...