ಬೆಂಗಳೂರು: ವಲಸೆ ಕಾರ್ಮಿಕರು ಊರುಗಳಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳಿ ವಲಸೆ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ್ದಾರೆ.
ಊರಿಗೆ ಹೋಗಲು ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ಕಾಂಗ್ರೆಸ್ ಸಹಾಯ ಮಾಡಿದ್ದು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ದಿನೇಶ್ ಗುಂಡೂರಾವ್, ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವು ನಾಯಕರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳಿದ್ದಾರೆ.
ಊರಿಗೆ ಹೋಗಲು ರೆಡಿಯಾಗಿದ್ದ ವಲಸೆ ಕಾರ್ಮಿಕರಿಗೆ ಗಾಬರಿಯಾಗಬೇಡಿ, ಸುರಕ್ಷಿತವಾಗಿ ಊರಿಗೆ ತೆರಳಿ. ನಿಮ್ಮೊಂದಿಗೆ ರಾಜ್ಯ ಸರ್ಕಾರ ಇದೆ, ನಾವಿದ್ದೇವೆ ಧೈರ್ಯವಾಗಿ ಊರಿಗೆ ತೆರಳಿ. ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಊಟ ಮಾಡಿಕೊಳ್ಳಿ ಗಾಬರಿಯಾಗಬೇಡಿ, ಸುರಕ್ಷಿತವಾಗಿ ಊರಿಗೆ ಹೋಗಿ ಎಂದು ತಿಳಿಸಿದ್ದಾರೆ.