ಹಾವೇರಿ: ಲಾಕ್ ಡೌನ್ ಅವಧಿಯಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಕ್ರಮಕೈಗೊಂಡಿರುವ ಸರ್ಕಾರ ಕೃಷಿ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆ. ಅದೇ ರೀತಿ ಮೆಕ್ಕೆಜೋಳ ಬೆಳೆಗಾರರಿಗೆ ಸಿಹಿಸುದ್ದಿ ನೀಡಲಾಗಿದೆ.
ಮೆಕ್ಕೆಜೋಳಕ್ಕೆ ಕ್ವಿಂಟಾಲ್ಗೆ 1760 ರೂಪಾಯಿ ದರ ನಿಗದಿಪಡಿಸಿ ಒಂದು ವರ್ಷದ ಅವಧಿಗೆ ನೇರವಾಗಿ ರೈತರಿಂದ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಹಿರೇಕೆರೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂಗಾರು ಹಂಗಾಮು ಆರಂಭಗೊಂಡಿದೆ. 73 ಲಕ್ಷ ಹೆಕ್ಟೇರ್ ಮುಂಗಾರು ಹಂಗಾಮಿನ ಗುರಿ ಹೊಂದಲಾಗಿದೆ. ಪೂರ್ವ ಮುಂಗಾರಿನಲ್ಲಿ 2.22 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹಾಕಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.