alex Certify ಬಿಗ್ ನ್ಯೂಸ್: 42,216 ಸಕ್ರಿಯ ಪ್ರಕರಣ, ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: 42,216 ಸಕ್ರಿಯ ಪ್ರಕರಣ, ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 3648 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 67,420 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 730 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 23,795 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 42,216 ಸಕ್ರಿಯ ಪ್ರಕರಣಗಳು ಇದ್ದು 580 ಜನರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 72 ಜನ ಮೃತಪಟ್ಟಿದ್ದು, ಇದುವರೆಗೆ 1403 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 1452 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸಂಖ್ಯೆ 33,229 ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಇಂದು 31 ಜನ ಮೃತಪಟ್ಟಿದ್ದು ಇದುವರೆಗೆ 698 ಜನ ಸಾವನ್ನಪ್ಪಿದ್ದಾರೆ.

ಬಳ್ಳಾರಿ 234, ಬೆಂಗಳೂರು ಗ್ರಾಮಂತರ 208, ಧಾರವಾಡ 200, ವಿಜಯಪುರ 160, ಮೈಸೂರು 124, ಉಡುಪಿ 98, ದಕ್ಷಿಣಕನ್ನಡ 89, ಉತ್ತರಕನ್ನಡ 78, ದಾವಣಗೆರೆ 73, ಹಾಸನ 67, ಕೊಪ್ಪಳ 62, ಬೆಳಗಾವಿ, ಚಿಕ್ಕಬಳ್ಳಾಪುರ ತಲಾ 60, ರಾಮನಗರ 56, ತುಮಕೂರು 55, ಬಾಗಲಕೋಟೆ 54, ಚಾಮರಾಜನಗರ 49, ಯಾದಗಿರಿ, ಚಿಕ್ಕಮಗಳೂರು ತಲಾ 43, ಮಂಡ್ಯ, ಕೋಲಾರ ತಲಾ 41, ಹಾವೇರಿ 36, ಗದಗ 31, ಚಿತ್ರದುರ್ಗ 29, ಬೀದರ್ 26, ಶಿವಮೊಗ್ಗ 19, ಕೊಡಗು 8, ರಾಯಚೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...