ತುಮಕೂರು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 74 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ವ್ಯಕ್ತಿ ಮೃತಪಟ್ಟ ನಂತರ ವೈದ್ಯಕೀಯ ವರದಿ ಬಂದಿದ್ದು, ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿರುವುದು ಗೊತ್ತಾಗಿದೆ. ಸಚಿವ ಸುರೇಶ್ ಕುಮಾರ್ ತುಮಕೂರು ಜಿಲ್ಲೆಯ ವೃದ್ಧನ ಸಾವಿನ ಬಗ್ಗೆ ಖಚಿತಪಡಿಸಿದ್ದಾರೆ. ತುಮಕೂರು ನಗರದ ನಿವಾಸಿ 74 ವರ್ಷದ ವೃದ್ಧ ಕೊರೋನಾದಿಂದ ಮೃತಪಟ್ಟಿದ್ದು ಇದರೊಂದಿಗೆ ತುಮಕೂರು ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದಂತಾಗಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 535 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 12 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಕಲಬುರ್ಗಿ ಜಿಲ್ಲೆಯ 8 ಜನರಿಗೆ, ಬೆಳಗಾವಿ, ಮೈಸೂರು, ದಾವಣಗೆರೆ ಜಿಲ್ಲೆಯ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. 535 ಮಂದಿ ಪೈಕಿ 21 ಮಂದಿ ಸಾವನ್ನಪ್ಪಿದ್ದಾರೆ.