ಕೋರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡು ಸೇವೆ ಸಲ್ಲಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಸೇವಾನಿರತರ ರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿವೆ.
ಕೊರೋನಾ ನಿಗ್ರಹಕ್ಕೆ ಜೀವದ ಹಂಗುತೊರೆದು ಹೋರಾಟ ನಡೆಸುತ್ತಿರುವ ವೈದ್ಯರಿಗೆ, ವೈದ್ಯಕೀಯ ಸಿಬ್ಬಂದಿಗೆ ಕಿರುಕುಳ ನೀಡುವುದನ್ನು ಜಾಮೀನು ರಹಿತ ಅಪರಾಧವೆಂದು ಪರಿಗಣಿಸಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ.
ಕೇಂದ್ರ ಹೊಸ ಕಾನೂನಿನ ಅನ್ವಯ ಕಿರುಕುಳ ನೀಡಿದವರಿಗೆ 7ವರ್ಷ ಜೈಲು 5 ಲಕ್ಷ ರೂಪಾಯಿ ದಂಡ ಹಾಕಲಾಗುವುದು. ಹಲ್ಲೆ ದೌರ್ಜನ್ಯ ಎಸಗಿದವರಿಗೆ ಶಿಕ್ಷೆ ನೀಡಲು ಕಾನೂನು ತರಲಾಗಿದೆ.
ಅದೇ ರೀತಿ ರಾಜ್ಯದಲ್ಲಿಯೂ ಸುಗ್ರೀವಾಜ್ಞೆ ಮೂಲಕ ವೈದ್ಯ ಸಿಬ್ಬಂದಿ, ಪೊಲೀಸರು, ಅಧಿಕಾರಿಗಳಿಗೂ ಕಾನೂನು ರಕ್ಷಣೆ ನೀಡಲಾಗಿದ್ದು ಹಲ್ಲೆಕೋರರಿಗೆ 5 ಲಕ್ಷ ರೂಪಾಯಿವರೆಗೆ ದಂಡ, ಆಸ್ತಿ ಹಾನಿ ಮಾಡಿದರೆ ದುಪ್ಪಟ್ಟು ದಂಡ ವಸೂಲಿ ಮಾಡಲಾಗುವುದು. 3 ವರ್ಷವರೆಗೆ ಜೈಲು ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ಹೊರಡಿಸಲಾಗಿದೆ.