alex Certify ತಡರಾತ್ರಿ ಪ್ರತಿಭಟನೆ ನಂತರ ನಡೀತು ಅರೆಬರೆ ಸುಟ್ಟಿದ್ದ ಮೃತದೇಹದ ಅಂತ್ಯಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಪ್ರತಿಭಟನೆ ನಂತರ ನಡೀತು ಅರೆಬರೆ ಸುಟ್ಟಿದ್ದ ಮೃತದೇಹದ ಅಂತ್ಯಕ್ರಿಯೆ

ಶಿವಮೊಗ್ಗ: ಮೃತ ಕೊರೊನಾ ಸೋಂಕಿತನ ಅಂತ್ಯಕ್ರಿಯೆ ವೇಳೆ ಬೇಜವಾಬ್ದಾರಿ ತೋರಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಿನ್ನೆ ರಾತ್ರಿ ಸ್ಥಳೀಯರ ವಿರೋಧದ ನಡುವೆಯೂ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಅಪೂರ್ಣ ಅಂತ್ಯಸಂಸ್ಕಾರ ಮಾಡಿ ಅಧಿಕಾರಿಗಳು ತೆರಳಿದ್ದಾರೆ. ಅಧಿಕಾರಿಗಳ ವಿರುದ್ಧ ಚಿತಾಗಾರದ ಎದುರು ಜನ ಪ್ರತಿಭಟನೆ ನಡೆಸಿದ್ದಾರೆ.

ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರ ನೇತೃತ್ವದಲ್ಲಿ ಸ್ಥಳೀಯರು ಧರಣಿ ನಡೆಸಿದ್ದು ಧರಣಿ ಹಿನ್ನೆಲೆ ತಡರಾತ್ರಿ 2 ಗಂಟೆಗೆ ಮಹಾನಗರ ಪಾಲಿಕೆ ಆಯುಕ್ತರು ಭೇಟಿ ನೀಡಿದ್ದಾರೆ. ಅರೆಬರೆ ಅಂತ್ಯಕ್ರಿಯೆ ಮಾಡಿ ಸುಟ್ಟಿದ್ದ ಶವದ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...