alex Certify BIG NEWS: ಬೆಂಗಳೂರು ಹಿಂದಿಕ್ಕಿದ ಉಡುಪಿಯಲ್ಲಿ ಸೋಂಕಿನ ಸುನಾಮಿ, ಒಂದೇ ದಿನ 150 ಮಂದಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ಹಿಂದಿಕ್ಕಿದ ಉಡುಪಿಯಲ್ಲಿ ಸೋಂಕಿನ ಸುನಾಮಿ, ಒಂದೇ ದಿನ 150 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ ಇಂದು 150 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಡಪಟ್ಟಿದೆ. ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 410 ಕ್ಕೆ ಏರಿಕೆಯಾಗಿದೆ. ಇವತ್ತು ಸೋಂಕು ಪತ್ತೆಯಾದ 150 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ ಎನ್ನಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ 16 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಮುಂಬೈನಿಂದ ವಾಪಸಾಗಿದ್ದ ಕಾರ್ಮಿಕರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದರು. ಕಾರ್ಮಿಕರಿಗೆ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ.

ಹಾಸನ ಜಿಲ್ಲೆಯಲ್ಲಿ ಮತ್ತೆ 9 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮುಂಬೈನಿಂದ ಚನ್ನರಾಯಪಟ್ಟಣಕ್ಕೆ 10 ಮಂದಿ ಆಗಮಿಸಿದ್ದು, ಅವರಲ್ಲಿ 9 ಮಂದಿಗೆ ಸೋಂಕು ತಗುಲಿದೆ ಸೋಂಕಿತರ ಸಂಖ್ಯೆ 182 ಕ್ಕೆ ಏರಿಕೆಯಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...