ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 141 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇವರಲ್ಲಿ 90 ಮಂದಿ ಸೋಂಕಿತರು ಹೊರರಾಜ್ಯದಿಂದ ಬಂದವರಾಗಿದ್ದಾರೆ.
ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 32 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು 103 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು 2922 ಮಂದಿಗೆ ಕೊರೊನಾ ಸೋಂಕು ತಗಲಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1874 ಆಗಿದೆ. 997 ಮಂದಿ ಇದುವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 15 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರು ನಗರದಲ್ಲಿ 33, ಯಾದಗಿರಿಯಲ್ಲಿ 18, ಉಡುಪಿಯಲ್ಲಿ 13, ಹಾಸನ 13, ಬೀದರ್ 10, ದಕ್ಷಿಣ ಕನ್ನಡ 14, ವಿಜಯಪುರ 11, ಶಿವಮೊಗ್ಗ 6 ಸೇರಿದಂತೆ ಇವತ್ತು ಒಂದೇ ದಿನ 141 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಲ್ಲಿ ಗೊತ್ತಾಗಿದೆ.