ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 388 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 3796 ಕ್ಕೆ ಏರಿಕೆಯಾಗಿದೆ.
ಇವತ್ತು ಒಂದೇ ದಿನ 388 ಮಂದಿಗೆ ಸೋಂಕು ತಗುಲಿದ್ದು, ಇವರಲ್ಲಿ 367 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದಾರೆ. ಇವತ್ತು 75 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 1403 ಜನ ಬಿಡುಗಡೆಯಾದಂತಾಗಿದೆ.
2339 ಸಕ್ರಿಯ ಪ್ರಕರಣಗಳು ಇದ್ದು ಈವರೆಗೆ ಒಟ್ಟು 52 ಮಂದಿ ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಉಡುಪಿಯಲ್ಲಿ ಕೊರೋನಾ ಸುನಾಮಿ ಅಪ್ಪಳಿಸಿದ್ದು 150 ಸೋಂಕಿತರು ಪತ್ತೆಯಾಗಿದ್ದಾರೆ. ಕಲ್ಬುರ್ಗಿಯಲ್ಲಿ ಬರೋಬ್ಬರಿ 100 ಮಂದಿಗೆ ಸೋಂಕು ತಗುಲಿದೆ. ಬೆಂಗಳೂರು ನಗರದಲ್ಲಿ 12, ಯಾದಗಿರಿ 5, ಮಂಡ್ಯ 4, ರಾಯಚೂರು 16, ಬೆಳಗಾವಿ 51, ಹಾಸನ 9, ಬೀದರ್ 10, ದಾವಣಗೆರೆ 7 ಸೇರಿದಂತೆ ಒಟ್ಟು 388 ಮಂದಿಗೆ ಇವತ್ತು ಒಂದೇ ದಿನ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.