ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಹಣಕಾಸು ಸ್ಥಿತಿ ಸಂಕಷ್ಟದಲ್ಲಿದ್ದರೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ್ದು, ಶಾಲಾ ಮಕ್ಕಳ ಸೈಕಲ್ ವಿತರಣೆ ಯೋಜನೆಯನ್ನು ಸ್ಥಗಿತಗೊಳಿಸಬಾರದು ಎಂದು ಹೇಳಿದ್ದಾರೆ.
ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಯೋಜನೆಯನ್ನು ಸ್ಥಗಿತಗೊಳಿಸದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸೈಕಲ್ ವಿತರಣೆ ಯೋಜನೆ ಜಾರಿಗೊಳಿಸಲಾಗಿದೆ.
ಯಾವುದೇ ಕಾರಣಕ್ಕೂ ಯೋಜನೆಯನ್ನು ಸ್ಥಗಿತಗೊಳಿಸಬಾರದು. ಅದೇ ರೀತಿ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದ್ದಾರೆ.