ರಾಮನಗರ: ಕೆಲವರು ದೇವೇಗೌಡರ ಕುಟುಂಬಕ್ಕೆ ರಕ್ಷಣೆ ಕೊಟ್ಟಿರುವುದಾಗಿ ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕೆ., ದೇವೇಗೌಡರ ಕುಟುಂಬಕ್ಕೆ ಬೆಂಬಲವಾಗಿ ನಿಂತವರು ನಾವು ಎಂದು ಹೇಳಿಕೊಳ್ಳುತ್ತಾ ಕೆಲವರು ಡಬಲ್ ಗೇಮ್ ರಾಜಕೀಯ ಮಾಡುತ್ತಿದ್ದು ಇದನ್ನು ಬಿಡಬೇಕು ಎಂದು ಹೇಳಿದ್ದಾರೆ.
ನಾವು ಸ್ಟಂಟ್ ಮಾಡಿ ರಾಜಕೀಯ ಮಾಡಿದವರಲ್ಲ. ನಮಗೆ ಅದು ಗೊತ್ತಿಲ್ಲ. ನನಗೆ ಬೆಂಬಲ ನೀಡಿದವರೆ ರಾಮನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಹೊರಟಿದ್ದಾರೆ. ಇಂತಹ ಕುತಂತ್ರಗಳು ನನಗೆ ಗೊತ್ತಿದೆ ಎಂದು ತಿಳಿಸಿದ್ದಾರೆ.
ನಮಗೆ ಬೆಂಬಲ ನೀಡಿದಂತೆ ಮಾಡಿ ಹೊರಗಡೆ ಪ್ರಚಾರವನ್ನು ಯಾವ ರೀತಿ ಪ್ರಚಾರವನ್ನು ಪಡೆದುಕೊಂಡಿದ್ದಾರೆ ಎನ್ನುವುದೂ ಗೊತ್ತಿದೆ. ಇದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಡಿ.ಕೆ. ಶಿವಕುಮಾರ್ ಸಹೋದರರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.