alex Certify ಅಮಾನವೀಯ ಘಟನೆ: ಆಂಬುಲೆನ್ಸ್ ನಲ್ಲೇ ಮೃತಪಟ್ಟ ರೋಗಿ, ಮಾರ್ಗಮಧ್ಯದಲ್ಲೇ ಬಿಟ್ಟು ಹೋದ ಚಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಾನವೀಯ ಘಟನೆ: ಆಂಬುಲೆನ್ಸ್ ನಲ್ಲೇ ಮೃತಪಟ್ಟ ರೋಗಿ, ಮಾರ್ಗಮಧ್ಯದಲ್ಲೇ ಬಿಟ್ಟು ಹೋದ ಚಾಲಕ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮಾದನಭಾವಿ ಗ್ರಾಮದಲ್ಲಿ ಆಂಬುಲೆನ್ಸ್ ಚಾಲಕ ರಸ್ತೆಯಲ್ಲಿಯೇ ಮೃತದೇಹ ಬಿಟ್ಟು ಪರಾರಿಯಾದ ಘಟನೆ ನಡೆದಿದೆ.

ಹೊನ್ನಾಳಿ ತಾಲೂಕು ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಆಂಬುಲೆನ್ಸ್ ನಲ್ಲಿ ರೋಗಿಯನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲೇ ಅರಬಗಟ್ಟ ನಿವಾಸಿ ಸಾವನ್ನಪ್ಪಿದ್ದಾರೆ. ಮಾನವೀಯತೆಯನ್ನೇ ಮರೆತ ಅಂಬುಲೆನ್ಸ್ ಚಾಲಕ ಮಾರ್ಗಮಧ್ಯದಲ್ಲೇ ಮೃತದೇಹ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮೃತನ ಕುಟುಂಬದವರು ಮಾರ್ಗಮಧ್ಯದಲ್ಲೇ ಆಂಬುಲೆನ್ಸ್ ಚಾಲಕ ಬಿಟ್ಟು ಹೋಗಿದ್ದರಿಂದ ಕಂಗಾಲಾಗಿದ್ದಾರೆ. ಮೃತ ವ್ಯಕ್ತಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಕೊರೋನಾ ಇರಲಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...