alex Certify ಊಟದಲ್ಲಿ ನಿದ್ದೆ ಮಾತ್ರೆ ಕೊಟ್ಟ ಪತ್ನಿ, ನಿದ್ದೆಗೆ ಜಾರಿದ ಪತಿ: ತಡರಾತ್ರಿ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಊಟದಲ್ಲಿ ನಿದ್ದೆ ಮಾತ್ರೆ ಕೊಟ್ಟ ಪತ್ನಿ, ನಿದ್ದೆಗೆ ಜಾರಿದ ಪತಿ: ತಡರಾತ್ರಿ ಘೋರ ಕೃತ್ಯ

ದಾವಣಗೆರೆ: ಅನೈತಿಕ ಸಂಬಂಧದ ಹಿನ್ನೆಲೆ ಸುಪಾರಿ ನೀಡಿ ಗಂಡನ ಕೊಲೆ ಮಾಡಿಸಿದ್ದ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ದಾವಣಗೆರೆ ಜಿಲ್ಲೆ ಜಗಳೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಭಾಗ್ಯಮ್ಮ(40), ಅಂಜಿನಪ್ಪ(30), ಚೌಡಪ್ಪ(28), ಮಾರುತಿ(25) ಬಂಧಿತ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ.

ಆರೋಪಿಗಳು ಗುಡ್ಡದನಿಂಗನಹಳ್ಳಿ ನಿವಾಸಿಗಳಾಗಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ನಿನ್ನೆ 45 ವರ್ಷದ ಬಸವರಾಜ್ ಅವರನ್ನು ಹತ್ಯೆ ಮಾಡಲಾಗಿತ್ತು. ಹತ್ಯೆಗೆ ಮೃತನ ಪತ್ನಿ ಭಾಗ್ಯಮ್ಮ  1 ಲಕ್ಷ ರೂ. ಸುಪಾರಿ ನೀಡಿದ್ದಳು ಎನ್ನಲಾಗಿದೆ.

ಗಂಡನಿಗೆ ತಿನ್ನುವ ಆಹಾರಕ್ಕೆ ನಿದ್ದೆ ಮಾತ್ರ ಹಾಕಿಕೊಟ್ಟಿದ್ದಾಳೆ. ಆತನ ನಿದ್ದೆಗೆ ಜಾರಿದ ನಂತರ ಆಟೋದಲ್ಲಿ ಹೊತ್ತುಕೊಂಡು ಹೋಗಿ ಕೊಲೆ ಮಾಡಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...