alex Certify BREAKING NEWS: ಬೆಚ್ಚಿ ಬಿದ್ದ ಬೆಣ್ಣೆ ನಗರಿ ದಾವಣಗೆರೆ: ಒಂದೇ ದಿನ 21 ಮಂದಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಚ್ಚಿ ಬಿದ್ದ ಬೆಣ್ಣೆ ನಗರಿ ದಾವಣಗೆರೆ: ಒಂದೇ ದಿನ 21 ಮಂದಿಗೆ ಕೊರೋನಾ ಪಾಸಿಟಿವ್

ಹಸಿರು ವಲಯದಲ್ಲಿದ್ದ ದಾವಣಗೆರೆಯಲ್ಲಿ ಇವತ್ತು ಒಂದೇ ದಿನ 21 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ.

ವಾರದ ಮೊದಲು ಹಸಿರು ವಲಯದಲ್ಲಿದ್ದ ದಾವಣಗೆರೆಯಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು  ರೆಡ್ ಜೋನ್ ನತ್ತ ಸಾಗುತ್ತಿದೆ. ಇವತ್ತು ಒಂದೇ ದಿನ ಬರೋಬ್ಬರಿ 21 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಈ ಕುರಿತು ಮಾಹಿತಿ ನೀಡಿದ್ದು, ಇಂದು 21 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಮೊನ್ನೆ 94, ನಿನ್ನೆ 72, ಇವತ್ತು 164 ಸ್ಯಾಂಪಲ್ ಕಳಿಸಿದ್ದು, ಇವತ್ತು ಒಂದೇ ದಿನ 21 ಪಾಸಿಟಿವ್ ಕೇಸ್ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...